ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

Published : Sep 22, 2023, 11:36 AM IST

ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ
ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದ ರೇವಣ್ಣ
ಹಾಸನ, ಮಂಡ್ಯ, ತುಮಕೂರು ಪಡೆಯಲು ಜೆಡಿಎಸ್ ಸಿದ್ಧತೆ

ಜೆಡಿಎಸ್-ಬಿಜೆಪಿ ಮೈತ್ರಿಯ ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಗುರುವಾರ ತಡರಾತ್ರಿವರೆಗೂ ದಳಪತಿಗಳ ಹೈ ವೋಲ್ಟೇಜ್ ಮೀಟಿಂಗ್ ನಡೆದಿದೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಮ್ಯಾರಥಾನ್ ಮೀಟಿಂಗ್ ನಡೆಸಲಾಗಿದೆ. ಬಿಜೆಪಿ(BJP) ಭೇಟಿಗೂ ಮುನ್ನ ಜೆಡಿಎಸ್(JDS) ನಾಯಕರು ಸಭೆ ನಡೆಸಿದ್ದು, ಮೈತ್ರಿ ಸಂಬಂಧ ದೇವೇಗೌಡರ(Devegowda) ದೆಹಲಿ ನಿವಾಸದಲ್ಲಿ ಮಾತುಕತೆ ನಡೆಸಲಾಗಿದೆ. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಪ್ರಜ್ವಲ್, ನಿಖಿಲ್, ಸಾರಾ ಮಹೇಶ್ ಈ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಯಾವೆಲ್ಲಾ ಕ್ಷೇತ್ರಗಳನ್ನು ಪಡೆಯಬೇಕು ಎಂದು ಮಾತುಕತೆ ನಡೆಸಿದ್ದು, ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ ಸಿಕ್ಕಿದೆ ಎನ್ನಲಾಗ್ತಿದೆ. ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದು ರೇವಣ್ಣ ಹೇಳಿದ್ದಾರಂತೆ. ಇಂದು ಜೆಡಿಎಸ್ ನಾಯಕರಿಂದ ಅಮಿತ್ ಶಾ(Amit Shah) ಭೇಟಿ ಮಾಡುವ ಸಾಧ್ಯತೆ ಇದೆ. ನಿನ್ನೆ ನಡೆಯುಬೇಕಿದ್ದ ಸಭೆ, ಮೀಸಲಾತಿ ಮಂಡನೆ ಹಿನ್ನೆಲೆ ಮುಂದೂಡಿಕೆಯಾಗಿದೆ. ಅಷ್ಟೇ ಅಲ್ಲದೇ ದೇವೇಗೌಡರನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾಗಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಸ್ಥಾನಗಳ ಸಂಖ್ಯೆ ಖಚಿತ ಪಡಿಸಿ ಎಂದು ಸಾವಂತ್ ಹೇಳಿದ್ದಾರಂತೆ. ಹಾಸನ, ಮಂಡ್ಯ, ತುಮಕೂರು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more