ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

Published : Sep 22, 2023, 11:36 AM IST

ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ
ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದ ರೇವಣ್ಣ
ಹಾಸನ, ಮಂಡ್ಯ, ತುಮಕೂರು ಪಡೆಯಲು ಜೆಡಿಎಸ್ ಸಿದ್ಧತೆ

ಜೆಡಿಎಸ್-ಬಿಜೆಪಿ ಮೈತ್ರಿಯ ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಗುರುವಾರ ತಡರಾತ್ರಿವರೆಗೂ ದಳಪತಿಗಳ ಹೈ ವೋಲ್ಟೇಜ್ ಮೀಟಿಂಗ್ ನಡೆದಿದೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಮ್ಯಾರಥಾನ್ ಮೀಟಿಂಗ್ ನಡೆಸಲಾಗಿದೆ. ಬಿಜೆಪಿ(BJP) ಭೇಟಿಗೂ ಮುನ್ನ ಜೆಡಿಎಸ್(JDS) ನಾಯಕರು ಸಭೆ ನಡೆಸಿದ್ದು, ಮೈತ್ರಿ ಸಂಬಂಧ ದೇವೇಗೌಡರ(Devegowda) ದೆಹಲಿ ನಿವಾಸದಲ್ಲಿ ಮಾತುಕತೆ ನಡೆಸಲಾಗಿದೆ. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಪ್ರಜ್ವಲ್, ನಿಖಿಲ್, ಸಾರಾ ಮಹೇಶ್ ಈ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಯಾವೆಲ್ಲಾ ಕ್ಷೇತ್ರಗಳನ್ನು ಪಡೆಯಬೇಕು ಎಂದು ಮಾತುಕತೆ ನಡೆಸಿದ್ದು, ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ ಸಿಕ್ಕಿದೆ ಎನ್ನಲಾಗ್ತಿದೆ. ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದು ರೇವಣ್ಣ ಹೇಳಿದ್ದಾರಂತೆ. ಇಂದು ಜೆಡಿಎಸ್ ನಾಯಕರಿಂದ ಅಮಿತ್ ಶಾ(Amit Shah) ಭೇಟಿ ಮಾಡುವ ಸಾಧ್ಯತೆ ಇದೆ. ನಿನ್ನೆ ನಡೆಯುಬೇಕಿದ್ದ ಸಭೆ, ಮೀಸಲಾತಿ ಮಂಡನೆ ಹಿನ್ನೆಲೆ ಮುಂದೂಡಿಕೆಯಾಗಿದೆ. ಅಷ್ಟೇ ಅಲ್ಲದೇ ದೇವೇಗೌಡರನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾಗಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಸ್ಥಾನಗಳ ಸಂಖ್ಯೆ ಖಚಿತ ಪಡಿಸಿ ಎಂದು ಸಾವಂತ್ ಹೇಳಿದ್ದಾರಂತೆ. ಹಾಸನ, ಮಂಡ್ಯ, ತುಮಕೂರು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more