ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

Published : Sep 22, 2023, 11:36 AM IST

ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ
ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದ ರೇವಣ್ಣ
ಹಾಸನ, ಮಂಡ್ಯ, ತುಮಕೂರು ಪಡೆಯಲು ಜೆಡಿಎಸ್ ಸಿದ್ಧತೆ

ಜೆಡಿಎಸ್-ಬಿಜೆಪಿ ಮೈತ್ರಿಯ ಅಂತಿಮ ಹಂತದ ಕಸರತ್ತು ನಡೆಯುತ್ತಿದೆ. ಗುರುವಾರ ತಡರಾತ್ರಿವರೆಗೂ ದಳಪತಿಗಳ ಹೈ ವೋಲ್ಟೇಜ್ ಮೀಟಿಂಗ್ ನಡೆದಿದೆ. ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಮ್ಯಾರಥಾನ್ ಮೀಟಿಂಗ್ ನಡೆಸಲಾಗಿದೆ. ಬಿಜೆಪಿ(BJP) ಭೇಟಿಗೂ ಮುನ್ನ ಜೆಡಿಎಸ್(JDS) ನಾಯಕರು ಸಭೆ ನಡೆಸಿದ್ದು, ಮೈತ್ರಿ ಸಂಬಂಧ ದೇವೇಗೌಡರ(Devegowda) ದೆಹಲಿ ನಿವಾಸದಲ್ಲಿ ಮಾತುಕತೆ ನಡೆಸಲಾಗಿದೆ. ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ, ಹೆಚ್‌.ಡಿ. ರೇವಣ್ಣ, ಪ್ರಜ್ವಲ್, ನಿಖಿಲ್, ಸಾರಾ ಮಹೇಶ್ ಈ ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎನ್ನಲಾಗ್ತಿದೆ. ಯಾವೆಲ್ಲಾ ಕ್ಷೇತ್ರಗಳನ್ನು ಪಡೆಯಬೇಕು ಎಂದು ಮಾತುಕತೆ ನಡೆಸಿದ್ದು, ದೇವೇಗೌಡರು, ಕುಮಾರಸ್ವಾಮಿ ಮಾತಿಗೆ ಸರ್ವಾನುಮತದ ಸಮ್ಮತಿ ಸಿಕ್ಕಿದೆ ಎನ್ನಲಾಗ್ತಿದೆ. ಅವರಿಬ್ಬರು ಏನು ಹೇಳ್ತಾರೋ ಅದನ್ನ ಒಪ್ಪಿಕೊಳ್ತೀವಿ ಎಂದು ರೇವಣ್ಣ ಹೇಳಿದ್ದಾರಂತೆ. ಇಂದು ಜೆಡಿಎಸ್ ನಾಯಕರಿಂದ ಅಮಿತ್ ಶಾ(Amit Shah) ಭೇಟಿ ಮಾಡುವ ಸಾಧ್ಯತೆ ಇದೆ. ನಿನ್ನೆ ನಡೆಯುಬೇಕಿದ್ದ ಸಭೆ, ಮೀಸಲಾತಿ ಮಂಡನೆ ಹಿನ್ನೆಲೆ ಮುಂದೂಡಿಕೆಯಾಗಿದೆ. ಅಷ್ಟೇ ಅಲ್ಲದೇ ದೇವೇಗೌಡರನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿಯಾಗಿದ್ದಾರೆ. ಅಮಿತ್ ಶಾ ಭೇಟಿಗೂ ಮುನ್ನ ಸ್ಥಾನಗಳ ಸಂಖ್ಯೆ ಖಚಿತ ಪಡಿಸಿ ಎಂದು ಸಾವಂತ್ ಹೇಳಿದ್ದಾರಂತೆ. ಹಾಸನ, ಮಂಡ್ಯ, ತುಮಕೂರು ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಡಿಎಂಕೆ ಮುಖಂಡ ಗುರುಸ್ವಾಮಿ ಮೂರ್ತಿ ಮೇಲೆ ಹಲ್ಲೆ: ಅಟ್ಯಾಕ್‌ನ ಭೀಕರ ದೃಶ್ಯ ಇಲ್ಲಿದೆ..

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more