ಧರ್ಮಸ್ಥಳ ಕೇಸ್​​.. SIT ತನಿಖೆಗಳಿಗೆ ಅಲ್ಪ ವಿರಾಮ? ಅಧಿವೇಶನ ಮುಗಿಯೋವರೆಗೂ ತನಿಖೆಗೆ ತಾತ್ಕಾಲಿಕ ಬ್ರೇಕ್?

ಧರ್ಮಸ್ಥಳ ಕೇಸ್​​.. SIT ತನಿಖೆಗಳಿಗೆ ಅಲ್ಪ ವಿರಾಮ? ಅಧಿವೇಶನ ಮುಗಿಯೋವರೆಗೂ ತನಿಖೆಗೆ ತಾತ್ಕಾಲಿಕ ಬ್ರೇಕ್?

Published : Aug 20, 2025, 12:22 PM IST

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗ್ತಿದೆ ಎಂದು ಕೇಸರಿ ಪಡೆ ಸಿಡಿದೆದ್ದಿದೆ. ಈಗಾಗಲೇ ಎಸ್​.ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಿದ್ದಾರೆ.

ಧರ್ಮಸ್ಥಳದ ಆಪರೇಷನ್ ಅಸ್ಥಿ ಪಂಜರ ಸದನದಲ್ಲಿ ಸದ್ದು ಮಾಡ್ತಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ದಿನಕ್ಕೊಂದು ಬಾಣ ಬಿಡ್ತಿವೆ. ಇದ್ರ ಮಧ್ಯೆ ಎಸ್​​​ಐಟಿ ಅನಾಮಿಕನ ವಿಚಾರಣೆ ತೀವ್ರಗೊಳಿಸಿತ್ತು. ಆದ್ರೆ, ಇಂದಿನಿಂದ ಅಧಿವೇಶನ ಮುಗಿಯೋವರೆಗೂ ಉತ್ಖನನ ಸೇರಿದಂತೆ ಎಲ್ಲಾ ರೀತಿಯ ಎಸ್ಐಟಿ ತನಿಖೆಗಳಿಗೆ ತಾತ್ಕಾಲಿಕ ವಿರಾಮ ಹಾಕಲಿದೆ ಎನ್ನಲಾಗ್ತಿದೆ. ಅಧಿವೇಶನ ನಡೆಯುವ ಹೊತ್ತಲ್ಲೇ ಎಸ್ಐಟಿ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಇದೆ. ಆದ್ರಿಂದ ಅನಾಮಿಕನ ವಶಕ್ಕೆ ಪಡೆಯುವ ಅಥವಾ ಕೋರ್ಟ್​ಗೆ  ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.

ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ ನಿರ್ಧಾರಕ್ಕೂ ಬ್ರೇಕ್ ಬೀಳಲಿದೆ. ಜತೆಗೆ ಧರ್ಮಸ್ಥಳ ಕೇಸ್​ ನಲ್ಲಿ ಸಾಮಾಜಿಕ ತಾಣಗಳ ವಿರುದ್ದವೂ ಕ್ರಮ ಕೈಗೊಳ್ಳುವುದಿಲ್ಲ ಎನ್ನಲಾಗ್ತಿದೆ. ಎಸ್ಐಟಿ ನಿತ್ಯದ ಬೆಳವಣಿಗೆಗಳ ಕಾರಣದಿಂದ ಅಧಿವೇಶನದಲ್ಲಿ ಸರ್ಕಾರಕ್ಕೆ ಉತ್ತರ ನೀಡುವ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಅಧಿವೇಶನ ಮುಕ್ತಾಯದವರೆಗೂ ಬಹುತೇಕ ಎಸ್ಐಟಿ ತನಿಖೆಗೆ ಬ್ರೇಕ್ ಹಾಕಲಾಗಿದೆ. ಮುಂದಿನ ಸೋಮವಾರದಿಂದಲೇ ಮತ್ತೊಂದು ಸುತ್ತಿನ ತನಿಖೆಗೆ ಎಸ್ಐಟಿ ಪ್ಲಾನ್ ಮಾಡಿಕೊಂಡಿದೆಯಂತೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗ್ತಿದೆ ಎಂದು ಕೇಸರಿ ಪಡೆ  ಸಿಡಿದೆದ್ದಿದೆ. ಈಗಾಗಲೇ ಎಸ್​.ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಿದ್ದಾರೆ. ಇದೀಗ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದಿಂದಲೂ ಧರ್ಮಸ್ಥಳ ಯಾತ್ರೆ ನಡೆಸಲಿದ್ದಾರೆ. 

ರಾಜ್ಯಾದ್ಯಂತ ಧರ್ಮಸ್ಥಳ ಬೆಂಬಲಿಸಿ ಯಾತ್ರೆ ನಡೆಸುವ ಮೂಲಕ  ಸರ್ಕಾರಕ್ಕೆ ತಿರುಗೇಟು ನೀಡಲು ಬಿಜೆಪಿ ಸಿದ್ದವಾಗಿದೆ. ಇನ್ನು, ಈ ವಾರದ ಕೊನೆಯಲ್ಲಿ ಜಯನಗರ ಪದ್ಮನಾಭನಗರ ಬೊಮ್ಮನಹಳ್ಳಿ ಭಾಗದ ಕ್ಷೇತ್ರದಿಂದ ಧರ್ಮಸ್ಥಳ ಚಲೋ ನಡೆಸಲು ತೀರ್ಮಾನಿಸಿದ್ದಾರಂತೆ.  ಇತ್ತ ಕೋಲಾರದಲ್ಲಿ ಸ್ವಾಭಿಮಾನಿ ಜನತಾ ಪಕ್ಷದ ಹೂಡಿ ವಿಜಯ್ ಕುಮಾರ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಲು ಸಿದ್ದರಾಗಿದ್ದಾರೆ. ನಾಳೆ ಮಾಲೂರಿನಿಂದ ಧರ್ಮಸ್ಥಳ ಚಲೋ ನಡೆಸಲಾಗುತ್ತದೆ. 350 ಕಾರ್​​ಗಳು ಮತ್ತು 30 ಬಸ್​​ಗಳಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳಸಲಿದ್ದಾರೆ.  ನಾಳೆ ಬೆಳಗ್ಗೆ 8 ಗಂಟೆಗೆ ವಿವಿಧ ಮಠಾಧೀಶರು ಹಾಗೂ ಸ್ವಾಮೀಜಿಗಳಿಂದ ಚಾಲನೆ ನೀಡಲಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more