ಧರ್ಮಸ್ಥಳ ಕೇಸ್​​.. SIT ತನಿಖೆಗಳಿಗೆ ಅಲ್ಪ ವಿರಾಮ? ಅಧಿವೇಶನ ಮುಗಿಯೋವರೆಗೂ ತನಿಖೆಗೆ ತಾತ್ಕಾಲಿಕ ಬ್ರೇಕ್?

ಧರ್ಮಸ್ಥಳ ಕೇಸ್​​.. SIT ತನಿಖೆಗಳಿಗೆ ಅಲ್ಪ ವಿರಾಮ? ಅಧಿವೇಶನ ಮುಗಿಯೋವರೆಗೂ ತನಿಖೆಗೆ ತಾತ್ಕಾಲಿಕ ಬ್ರೇಕ್?

Published : Aug 20, 2025, 12:22 PM IST

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗ್ತಿದೆ ಎಂದು ಕೇಸರಿ ಪಡೆ ಸಿಡಿದೆದ್ದಿದೆ. ಈಗಾಗಲೇ ಎಸ್​.ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಿದ್ದಾರೆ.

ಧರ್ಮಸ್ಥಳದ ಆಪರೇಷನ್ ಅಸ್ಥಿ ಪಂಜರ ಸದನದಲ್ಲಿ ಸದ್ದು ಮಾಡ್ತಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ದಿನಕ್ಕೊಂದು ಬಾಣ ಬಿಡ್ತಿವೆ. ಇದ್ರ ಮಧ್ಯೆ ಎಸ್​​​ಐಟಿ ಅನಾಮಿಕನ ವಿಚಾರಣೆ ತೀವ್ರಗೊಳಿಸಿತ್ತು. ಆದ್ರೆ, ಇಂದಿನಿಂದ ಅಧಿವೇಶನ ಮುಗಿಯೋವರೆಗೂ ಉತ್ಖನನ ಸೇರಿದಂತೆ ಎಲ್ಲಾ ರೀತಿಯ ಎಸ್ಐಟಿ ತನಿಖೆಗಳಿಗೆ ತಾತ್ಕಾಲಿಕ ವಿರಾಮ ಹಾಕಲಿದೆ ಎನ್ನಲಾಗ್ತಿದೆ. ಅಧಿವೇಶನ ನಡೆಯುವ ಹೊತ್ತಲ್ಲೇ ಎಸ್ಐಟಿ ಯಾವುದೇ ಮಹತ್ವದ ನಿರ್ಧಾರ ಕೈಗೊಳ್ಳದಂತೆ ಸೂಚನೆ ನೀಡಲಾಗಿದೆ ಅನ್ನೋ ಮಾಹಿತಿ ಇದೆ. ಆದ್ರಿಂದ ಅನಾಮಿಕನ ವಶಕ್ಕೆ ಪಡೆಯುವ ಅಥವಾ ಕೋರ್ಟ್​ಗೆ  ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ಬೀಳಲಿದೆ.

ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ ನಿರ್ಧಾರಕ್ಕೂ ಬ್ರೇಕ್ ಬೀಳಲಿದೆ. ಜತೆಗೆ ಧರ್ಮಸ್ಥಳ ಕೇಸ್​ ನಲ್ಲಿ ಸಾಮಾಜಿಕ ತಾಣಗಳ ವಿರುದ್ದವೂ ಕ್ರಮ ಕೈಗೊಳ್ಳುವುದಿಲ್ಲ ಎನ್ನಲಾಗ್ತಿದೆ. ಎಸ್ಐಟಿ ನಿತ್ಯದ ಬೆಳವಣಿಗೆಗಳ ಕಾರಣದಿಂದ ಅಧಿವೇಶನದಲ್ಲಿ ಸರ್ಕಾರಕ್ಕೆ ಉತ್ತರ ನೀಡುವ ಅನಿವಾರ್ಯತೆ ಉಂಟಾಗಿದೆ. ಹೀಗಾಗಿ ಅಧಿವೇಶನ ಮುಕ್ತಾಯದವರೆಗೂ ಬಹುತೇಕ ಎಸ್ಐಟಿ ತನಿಖೆಗೆ ಬ್ರೇಕ್ ಹಾಕಲಾಗಿದೆ. ಮುಂದಿನ ಸೋಮವಾರದಿಂದಲೇ ಮತ್ತೊಂದು ಸುತ್ತಿನ ತನಿಖೆಗೆ ಎಸ್ಐಟಿ ಪ್ಲಾನ್ ಮಾಡಿಕೊಂಡಿದೆಯಂತೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗ್ತಿದೆ ಎಂದು ಕೇಸರಿ ಪಡೆ  ಸಿಡಿದೆದ್ದಿದೆ. ಈಗಾಗಲೇ ಎಸ್​.ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಿದ್ದಾರೆ. ಇದೀಗ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದಿಂದಲೂ ಧರ್ಮಸ್ಥಳ ಯಾತ್ರೆ ನಡೆಸಲಿದ್ದಾರೆ. 

ರಾಜ್ಯಾದ್ಯಂತ ಧರ್ಮಸ್ಥಳ ಬೆಂಬಲಿಸಿ ಯಾತ್ರೆ ನಡೆಸುವ ಮೂಲಕ  ಸರ್ಕಾರಕ್ಕೆ ತಿರುಗೇಟು ನೀಡಲು ಬಿಜೆಪಿ ಸಿದ್ದವಾಗಿದೆ. ಇನ್ನು, ಈ ವಾರದ ಕೊನೆಯಲ್ಲಿ ಜಯನಗರ ಪದ್ಮನಾಭನಗರ ಬೊಮ್ಮನಹಳ್ಳಿ ಭಾಗದ ಕ್ಷೇತ್ರದಿಂದ ಧರ್ಮಸ್ಥಳ ಚಲೋ ನಡೆಸಲು ತೀರ್ಮಾನಿಸಿದ್ದಾರಂತೆ.  ಇತ್ತ ಕೋಲಾರದಲ್ಲಿ ಸ್ವಾಭಿಮಾನಿ ಜನತಾ ಪಕ್ಷದ ಹೂಡಿ ವಿಜಯ್ ಕುಮಾರ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಲು ಸಿದ್ದರಾಗಿದ್ದಾರೆ. ನಾಳೆ ಮಾಲೂರಿನಿಂದ ಧರ್ಮಸ್ಥಳ ಚಲೋ ನಡೆಸಲಾಗುತ್ತದೆ. 350 ಕಾರ್​​ಗಳು ಮತ್ತು 30 ಬಸ್​​ಗಳಲ್ಲಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳಸಲಿದ್ದಾರೆ.  ನಾಳೆ ಬೆಳಗ್ಗೆ 8 ಗಂಟೆಗೆ ವಿವಿಧ ಮಠಾಧೀಶರು ಹಾಗೂ ಸ್ವಾಮೀಜಿಗಳಿಂದ ಚಾಲನೆ ನೀಡಲಿದ್ದಾರೆ. 

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more