ಮೇಕೆದಾಟು ಯೋಜನೆ, ಕೇಂದ್ರ ಸಚಿವರ ಹೇಳಿಕೆಗೆ ಡಿಕೆ ಬ್ರದರ್ಸ್ ಕಿಡಿ

Mar 6, 2022, 6:34 PM IST

ಬೆಂಗಳೂರು (ಮಾ.6): ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ.

ಮೇಕೆದಾಟು ಯೋಜನೆಗೆ ಕೇಂದ್ರದಿಂದಲೇ 'ವಿವಾದ' ಪದ ಬಳಕೆ, ಕುಮಾರಸ್ವಾಮಿ ಆಕ್ರೋಶ

ಮೇಕೆದಾಟು ಯೋಜನೆ 'ವಿವಾದ'ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ.  ಇನ್ನು ಈ ಹೇಳಿಕೆಗೆ ಡಿಕೆ ಬ್ರದರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.