ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

ಪ್ರಧಾನಿ ಮೋದಿಗೆ ದೂರು ಕೊಡ್ತೇನೆಂದ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟ ಡಿ.ಕೆ. ಶಿವಕುಮಾರ್

Published : Aug 06, 2023, 07:04 PM IST

ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಹಗರಣಗಳ ಬಗ್ಗೆ ಪ್ರಧಾನಮಂತ್ರಿಗೆ ದೂರು ಕೊಡ್ತೇನೆಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಖಡಕ್‌ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್.

ಬೆಂಗಳೂರು (ಆ.06): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಧ್ಯೆ ಏಟು ಎದುರೇಟು ಈಗ ಜೋರಾಗಿದೆ. ಬಿಬಿಎಂಪಿಯಲ್ಲಿ 710 ಕೋಟಿ ರೂ. ಹಣ ಬಿಡುಗಡೆ ಆಗಿರುವ ಬಗ್ಗೆ ಕಮೀಷನ್‌ ವ್ಯವಹಾರ ಕುದುರಿಸಲಾಗಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದು, ಇದಕ್ಕೆ ಡಿಕೆಶಿವಕುಮಾರ್‌ ಕೂಡ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮೋದಿಗೆ ದೂರು ಕೊಡ್ತೇನೆ ಎಂದು ಹೇಳಿದ ಕುಮಾರಸ್ವಾಮಿಗೆ ಕನಕಪುರ ಬಂಡೆ ಖ್ಯಾತಿಯ ಡಿಕೆಶಿ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಕೇವಲ ಮಾತನಾಡಿದರೆ ಸಾಲದು, ಅದಕ್ಕೆ ತಕ್ಕಂತೆ ದಾಖಲೆಗಳನ್ನು ಕೂಡ ಕೊಡಬೇಕು. ಈಗ ಪ್ರಧಾನಮಂತ್ರಿ ಮೋದಿವರೆಗೂ ಹೋಗಿದ್ದಾರೆ. ಎಚ್‌ಡಿಕೆ ಆರೋಪಕ್ಕೆ ತಕ್ಕಂತೆ ನಾನೂ ಕೂಡ ಉತ್ತರ ಕೊಡಲು ಸಿದ್ಧನಾಗಿದ್ದೇನೆ. ಕುಮಾರಸ್ವಾಮಿ ಈಗ ನಿಮ್ಮ ಬಳಿ ಮಾತನಾಡಿದ್ದರೆ ಓಕೆ ಎನ್ನುತ್ತಿದ್ದೆ, ಈಗ ಪ್ರಧಾನಮಂತ್ರಿವರೆಗೂ ಹೋಗಿದ್ದು, ಅವರಿಗೆ ಎಲ್ಲಿ ಕೊಡಬೇಕೋ ಅಲ್ಲಿ ತಕ್ಕ ಉತ್ತರವನ್ನು ಕೊಡುತ್ತೇನೆ ಎಂದು ಮಾಧ್ಯಮಗಳಿಗೆ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more