Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Watch Video: ಒಕ್ಕಲಿಗರ ಕೋಟೆಯ ಮೇಲೆ ಡಿಕೆಶಿ, ಹೆಚ್‌ಡಿಕೆ ಕಣ್ಣು..!ವಿಧಾನಸಭಾ ಡ್ರೆಂಡ್ ಇಲ್ಲೂ ಮುಂದುವರೆಯುತ್ತಾ..?

Published : Apr 10, 2024, 05:39 PM IST

ರಾಜ್ಯದಲ್ಲಿ ಏಪ್ರಿಲ್ 26 ಮೊದಲ ಹಂತದ ಚುಣಾವಣೆ
ಮತದಾನ ನಡೆಯುವ 14 ಕ್ಷೇತ್ರಗಳಲ್ಲೂ ಒಕ್ಕಲಿಗರ ಬಲ
ಡಿಕೆಶಿ ಒಕ್ಕಲಿಗ ಟ್ರಂಪ್ ಕಾರ್ಟ್ ಇಲ್ಲೂ ವರ್ಕ್ ಆಗುತ್ತಾ..? 

ಲೋಕಸಭಾ ಚುಣಾವಣೆಗೆ ದಿನಗಳು ಹತ್ತಿರವಾಗುತ್ತಿವೆ. ಎಲ್ಲ ಪಕ್ಷಗಳ ಪ್ರಚಾರ ಜೋರಾಗಿದೆ. ಗೆಲುವಿನ ಲೆಕ್ಕಾಚಾರದಲ್ಲಿ ಎಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ಏಳು ಹಂತದಲ್ಲಿ ನಡೆಯಲಿರುವ ಚುನಾವಣೆ, ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮುಗಿಯಲಿದೆ. ಮೊದಲನೇ ಹಂತ ಇದೇ ಏಪ್ರಿಲ್ 26ರಂದು ಮತದಾನ(Voting) ನಡೆಯಲಿದೆ. ಈ ಮೊದಲ ಹಂತದ ಮತದಾನದ ಮೇಲೆ ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಮತ್ತು ಎಚ್ಡಿ ಕುಮಾರಸ್ವಾಮಿ(HD Kumaraswamy) ವಿಶೇಷ ಕಣ್ಣಿಟ್ಟಿದ್ದಾರೆ. ಮೊದಲನೇ ಹಂತ ಏಪ್ರಿಲ್ 26 ರಂದು ದಕ್ಷಿಣ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಎರಡನೇ ಹಂತ ಮೇ. 7 ರಂದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯಲಿದೆ. ಕಾಂಗ್ರೆಸ್(Congress) ಮತ್ತು ಜೆಡಿಎಸ್(JDS) ಪಕ್ಷಗಳು ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆ ಮೇಲೆ ವಿಶೇಷ ಕಣ್ಣಿಟ್ಟಿವೆ. ಅದರಲ್ಲೂ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳ ಮೇಲೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಯಾಕೆಂದ್ರೆ ಈ 14 ಕ್ಷೇತ್ರಗಳು ಸಹ  ಒಕ್ಕಲಿಗರೇ ವೋಟ್ಗಳೇ ನಿರ್ಣಾಯಕವಾಗಿರುವ ಕ್ಷೇತ್ರಗಳು. ಹೀಗಾಗಿ ಡಿಕೆಶಿ ಮತ್ತು ಎಚ್ಡಿಕೆ ಮೊದಲ ಹಂತದ ಮತದಾನದ ಮೇಲೆ ವಿಶೇಷ ಕಾಳಜಿ ವಹಿಸಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಮತದಾನದ 14 ಕ್ಷೇತ್ರಗಳು ಯಾವೆಂದು ನೋಡುವುದಾದ್ರೆ, ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಸೆಂಟ್ರಲ್. ಈ ಹದಿನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಈ ಹದಿನಾಲ್ಕು ಕ್ಷೇತ್ರಗಳಿಂದ ಒಟ್ಟು 358 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 

ಇದನ್ನೂ ವೀಕ್ಷಿಸಿ:  ಲಾಲ್ ಬಹದ್ದೂರ್ ಶಾಸ್ತ್ರಿಜೀ ಆ ದಿನ ಫೋನ್‌ನಲ್ಲಿ ಹೇಳಿದ್ದೇನು? ಇಂಡೋ-ಪಾಕ್‌ ಯುದ್ಧದ ಪರಿಣಾಮವೇನು ?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more