ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ: ಸಿಎಂ ಆಗ್ತೀನಿ ಎಂಬ ನಂಬಿಕೆ ನನಗಿದೆ ಎಂದ ಶಿವಕುಮಾರ್‌

ಅಜ್ಜಯ್ಯನ ದರ್ಶನ ಪಡೆದ ಡಿಕೆಶಿ: ಸಿಎಂ ಆಗ್ತೀನಿ ಎಂಬ ನಂಬಿಕೆ ನನಗಿದೆ ಎಂದ ಶಿವಕುಮಾರ್‌

Published : May 14, 2023, 02:43 PM IST

ಗುರಿ ತಲುಪಬೇಕಾದ್ರೆ ಗುರು ಮಾರ್ಗದರ್ಶನ ಬೇಕಾಗುತ್ತದೆ. ಗುರು ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯುತ್ತಾ ಇದ್ದೇವೆ. ಅವರು ಏನೇ ಹೇಳಿದ್ರು ನಾವು ಕೇಳ್ತಿವಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ತುಮಕೂರು: ಅಜ್ಜಯ್ಯನ ದರ್ಶನದ ಬಳಿಕ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ತಮಗೆಲ್ಲ ಗೊತ್ತಿದೆ. ಈ ಮಠ ನನಗೆ ಪುಣ್ಯ ದೈವ ಕ್ಷೇತ್ರವಾಗಿದೆ.
ನನಗೆ ಪ್ರತಿಯೊಂದು ಸಂದರ್ಭದಲ್ಲಿ ಕೂಡ ಗಂಗಾಧರ ಅಜ್ಜ, ಇಲ್ಲಿಯ ಸ್ವಾಮೀಜಿ ನನಗೆ ಮಾರ್ಗದರ್ಶನ ಮಾಡಿದ್ದಾರೆ. ನಾನು ಅಧಿಕಾರ ತೆಗೆದುಕೊಂಡಾಗಿನಿಂದಲೂ, ಯಾರಿಗೆ ಟಿಕೆಟ್ ಕೊಡ್ಬೇಕು, ಯಾರಿಗೆ ಕೊಡ್ಬಾರ್ದು ಅನ್ನೋದನ್ನ, ಇಲ್ಲೇ ಮಾರ್ಗದರ್ಶನ ಪಡೆದು ನಿರ್ಧಾರ ಮಾಡಿದ್ದೇನೆ. ನನಗೆ ಸಂಪೂರ್ಣವಾದ ಮಾರ್ಗದರ್ಶನ ಕೊಟ್ಟಿದ್ದಾರೆ. ಇನ್ಕಮ್ ಟ್ಯಾಕ್ಸ್, ಐಟಿ ರೇಡ್ ಆದಾಗಲೂ ನಾನು ಅಜ್ಜಯ್ಯನ ಮಾರ್ಗದರ್ಶನ ಪಡೆದಿದ್ದೆ ಎಂದು ಡಿಕೆಶಿ ಹೇಳಿದ್ದಾರೆ. ಹೆಲಿಕಾಪ್ಟರ್ ದುರಂತ ಆದ ನಂತರ ಕೂಡ ನನ್ನ ಮಗಳು ಇಲ್ಲಿಗೆ ಬಂದು ಹೋದಳು. ನನಗೆ ಮಾನಸಿಕವಾಗಿ ಧೈರ್ಯ ಕೊಟ್ಟವರು ಅಜ್ಜಯ್ಯನವ್ರು. ಯಾರ ಹಂಗಿನಲ್ಲೂ ನಾವು ಅಧಿಕಾರ ಮಾಡ್ಬಾರ್ದು ಅಂತಾ, ನಾನು 134 ಸೀಟು ಬರಬೇಕೆಂದು ಬೇಡಿಕೊಂಡಿದ್ದೆ. ಹಾಗೆಯೇ ಗೆದ್ದಿದ್ದೀವಿ. ನಾನು ಅಧಿಕಾರ ಹಿಡಿದಾಗಲೇ, ಹೆಣ್ಣು ಮಕ್ಕಳ ಬಗ್ಗೆ ಹೆಚ್ಚು ಚಿಂತನೆ ಮಾಡ್ಬೇಕು ಅನ್ನೋ ಮಾರ್ಗದರ್ಶನ ಬಂದಿತ್ತು. ಹೀಗಾಗಿಯೇ ನಾವು ಗೃಹಲಕ್ಷ್ಮೀ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ಕೊಡೋ ಯೋಜನೆ ಮಾಡಿದ್ದೀವಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಗುರಿ ತಲುಪಬೇಕಾದ್ರೆ ಗುರು ಮಾರ್ಗದರ್ಶನ ಬೇಕಾಗುತ್ತೆ. ಗುರು ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯುತ್ತಾ ಇದ್ದೇವೆ. ಅವರು ಏನೇ ಹೇಳಿದ್ರು ನಾವು ಕೇಳ್ತಿವಿ. ನೋಡೋಣ ಸಿಎಂ ಆಗ್ತೀನಿ ಅನ್ನೋ ನಂಬಿಕೆ ನನಗಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ನಾನೇ ಸಿಎಂ ಆಗ್ತೀನಿ ಅನ್ನೋ ವಿಶ್ವಾಸವನ್ನು ಡಿಕೆಶಿ ವ್ಯಕ್ತಪಡಿಸಿದರು. 

ಇದನ್ನೂ ವೀಕ್ಷಿಸಿ: ಬೆಳಗಾವಿಯಿಂದ 11 ಜನ ಗೆದ್ದಿರುವುದು ಸ್ವಾಭಿಮಾನದ ಪ್ರತೀಕವಾಗಿದೆ: ಲಕ್ಷ್ಮೀ ಹೆಬ್ಬಾಳ್ಕರ್‌

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more