'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

Published : May 20, 2023, 08:22 PM IST

ವಿಧಾನಸಭೆ ಚುನಾವಣೆಗೂ ಮುನ್ನ ಎಲ್ಲರಿಗೂ ಫ್ರೀ, ಎಲ್ಲರಿಗೂ ದುಡ್ಡು ಎಂದು ಹೇಳಿದ್ದ ಕಾಂಗ್ರೆಸ್‌ ಅಧಿಕಾರಕ್ಕೇರಿದ ಬಳಿಕ ವರಸೆ ಬದಲಾಯಿಸುವ ಲಕ್ಷಣ ತೋರಿದೆ. ಈ ನಡುವೆ ಡಿಕೆ ಶಿವಕುಮಾರ್ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ

ಬೆಂಗಳೂರು (ಮೇ.20): ಗ್ಯಾರಂಟಿಗಳ ಮೇಲೆಯೆ ಅಧಿಕಾರ ಹಿಡಿದ ಕಾಂಗ್ರೆಸ್‌ ಪಕ್ಷ, ಶನಿವಾರ ನಡೆದ ಸರ್ಕಾರದ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ತನ್ನೆಲ್ಲಾ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದೆ. ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಇದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿರುವ ಮಾತಿ ವಿವಾದಕ್ಕೆ ಕಾರಣವಾಗಿದೆ.

ಕ್ಯಾಬಿನೆಟ್‌ ಸಭೆ ಮುಗಿಸಿ ಗ್ಯಾರಂಟಿ ನಿರ್ಧಾರದ ಕುರಿತಾಗಿ ಘೋಷಣೆ ಮಾಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ, 'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ' ಎಂದು ಮಾಧ್ಯಮದವರಿಗೆ ಕೊಂಕಾಗಿ ಪ್ರಶ್ನೆ ಮಾಡಿದ್ದಾರೆ. ಚುನಾವಣೆಯ ವೇಳೆ ಎಲ್ಲರಿಗೂ ಗ್ಯಾರಂಟಿ ಕೊಡೋದಾಗಿ ಸ್ವತಃ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದರೆ, ಸುದ್ದಿಗೋಷ್ಠಿಯಲ್ಲಿ ಮಾತ್ರ ಎಲ್ಲಾ ವಿವರಗಳನ್ನು ಪಡೆದು ಅರ್ಹರಿಗೆ ಮಾತ್ರವೇ ಗ್ಯಾರಂಟಿ ನೀಡುವ ಮಾತನಾಡಿದ್ದಾರೆ.

ತಾತ್ವಿಕ ಒಪ್ಪಿಗೆಯ ಕಾಂಗ್ರೆಸ್‌ ಗ್ಯಾರಂಟಿಗೆ ಬೊಮ್ಮಾಯಿ ಟೀಕೆ 'ಮನಸ್ಸಿದ್ದರೆ ಮಾರ್ಗ, ಇಲ್ಲದೆ ಇದ್ದರೆ ನೆಪ'!

ಚುನಾವಣೆಯಲ್ಲಿ ನಿಮ್ಮ ಭಾಷಣದಲ್ಲಿ ಎಲ್ಲವೂ ಉಚಿತ ಅಂತಾ ಹೇಳಿದ್ರಲ್ಲ, ಅದೇನಾಯ್ತು ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸಿದ ಡಿಕೆ ಶಿವಕುಮಾರ್‌, 'ಅದೇ ಅದೇ..' ಎಂದು ಹೇಳುತ್ತಾ ಹಾರಿಕೆಯ ಉತ್ತರ ನೀಡಿದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more