ಕಲ್ಯಾಣ ಕರ್ನಾಟಕ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ರಣತಂತ್ರ! ಡಿಕೆಶಿ ಮಾಸ್ಟರ್ ಪ್ಲ್ಯಾನ್‌ ಏನು?

ಕಲ್ಯಾಣ ಕರ್ನಾಟಕ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ರಣತಂತ್ರ! ಡಿಕೆಶಿ ಮಾಸ್ಟರ್ ಪ್ಲ್ಯಾನ್‌ ಏನು?

Published : Apr 27, 2024, 11:28 AM ISTUpdated : Apr 27, 2024, 11:29 AM IST

ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಾಕಿ ಉಳಿದಿರುವ 14 ಕ್ಷೇತ್ರಗಳ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಂಚಿಕೆ ಮಾಡಿದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ 14 ಸಚಿವರ ನಿಯೋಜನೆ ಮಾಡಲಾಗಿದ್ದು, ಈಗಿರುವ ಉಸ್ತುವಾರಿಗಳ ಜೊತೆಗೆ ಮತ್ತೊಬ್ಬ ಸಚಿವರನ್ನ ಡಿಕೆಶಿ ನೇಮಕ ಮಾಡಿದ್ದಾರೆ.  
 

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Elections 2024) ಮೊದಲ ಹಂತ ಮುಗಿದಿದೆ. ಈಗ ಕಾಂಗ್ರೆಸ್(Congress) ಪಾಲಿಗೆ ಎರಡನೇ ಹಂತ ಅತ್ಯಂತ ನಿರ್ಣಾಯಕವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ನಿರೀಕ್ಷೆ ಇದೆ. ಮೊದಲಾರ್ಧ ಮುಗಿದಿರುವ ಕಾರಣ ನಾಯಕರ ಪೂರ್ಣ ಪ್ರಮಾಣದ ಬಳಕೆಗೆ ಕಾಂಗ್ರೆಸ್‌ ಮುಂದಾಗಿದೆ. ಬಾಕಿ ಉಳಿದಿರುವ 14 ಕ್ಷೇತ್ರಗಳ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಂಚಿಕೆ ಮಾಡಿದ್ದಾರೆ. ಅದರಂತೆ 14 ಲೋಕಸಭಾ ಕ್ಷೇತ್ರಗಳಿಗೆ(14 Lok Sabha Constituencies) 14 ಸಚಿವರ ನಿಯೋಜನೆ ಮಾಡಲಾಗಿದ್ದು,  ಈಗಿರುವ ಉಸ್ತುವಾರಿಗಳ ಜೊತೆಗೆ ಮತ್ತೊಬ್ಬ ಸಚಿವರನ್ನ ಡಿಕೆಶಿ ನೇಮಕ ಮಾಡಿದ್ದಾರೆ. ಅದರಂತೆ ನಾಳೆಯಿಂದಲೇ ಬಾಕಿ ಉಳಿದಿರುವ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದ ತಂತ್ರಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೆ ಈಗ ಮುಕ್ತಾಯ ಆಗಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೈ ಶಾಸಕರಿಗೂ ಈ ಜವಾಬ್ದಾರಿ ನೀಡಲಾಗಿದೆ. ಇದರ ಜೊತೆಗೆ ಸಮುದಾಯವಾರು, ಪ್ರಭಾವಿ ನಾಯಕರನ್ನೂ ಸಹ ಮತ ಸೆಳೆಯಲು ಬಳಕೆ ಮಾಡಿಕೊಳ್ಳಲಾಗಿದೆ. ಆಯಾ ಸಮುದಾಯಗಳ ಮತ ಸೆಳೆಯಲು ಅದೇ ಸಮುದಾಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಬಾಕಿ ಉಳಿದಿರುವ 14 ಲೋಕಸಭಾ ಕ್ಷೇತ್ರದಲ್ಲಿ ರಣತಂತ್ರ ರೂಪಿಸಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha elections 2024: 14 ಲೋಕಸಭಾ ಕ್ಷೇತ್ರದಲ್ಲಿನ ಮತದಾನ ಅಂತ್ಯ, ಮತಯಂತ್ರಗಳಲ್ಲಿ 247 ಅಭ್ಯರ್ಥಿಗಳ ಭವಿಷ್ಯ ಭದ್ರ!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?