ಕಲ್ಯಾಣ ಕರ್ನಾಟಕ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ರಣತಂತ್ರ! ಡಿಕೆಶಿ ಮಾಸ್ಟರ್ ಪ್ಲ್ಯಾನ್‌ ಏನು?

ಕಲ್ಯಾಣ ಕರ್ನಾಟಕ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ರಣತಂತ್ರ! ಡಿಕೆಶಿ ಮಾಸ್ಟರ್ ಪ್ಲ್ಯಾನ್‌ ಏನು?

Published : Apr 27, 2024, 11:28 AM ISTUpdated : Apr 27, 2024, 11:29 AM IST

ಲೋಕಸಭಾ ಚುನಾವಣೆ ಹಿನ್ನೆಲೆ ಕರ್ನಾಟಕದಲ್ಲಿ ಬಾಕಿ ಉಳಿದಿರುವ 14 ಕ್ಷೇತ್ರಗಳ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಂಚಿಕೆ ಮಾಡಿದ್ದಾರೆ. 14 ಲೋಕಸಭಾ ಕ್ಷೇತ್ರಗಳಿಗೆ 14 ಸಚಿವರ ನಿಯೋಜನೆ ಮಾಡಲಾಗಿದ್ದು, ಈಗಿರುವ ಉಸ್ತುವಾರಿಗಳ ಜೊತೆಗೆ ಮತ್ತೊಬ್ಬ ಸಚಿವರನ್ನ ಡಿಕೆಶಿ ನೇಮಕ ಮಾಡಿದ್ದಾರೆ.  
 

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Elections 2024) ಮೊದಲ ಹಂತ ಮುಗಿದಿದೆ. ಈಗ ಕಾಂಗ್ರೆಸ್(Congress) ಪಾಲಿಗೆ ಎರಡನೇ ಹಂತ ಅತ್ಯಂತ ನಿರ್ಣಾಯಕವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ನಿರೀಕ್ಷೆ ಇದೆ. ಮೊದಲಾರ್ಧ ಮುಗಿದಿರುವ ಕಾರಣ ನಾಯಕರ ಪೂರ್ಣ ಪ್ರಮಾಣದ ಬಳಕೆಗೆ ಕಾಂಗ್ರೆಸ್‌ ಮುಂದಾಗಿದೆ. ಬಾಕಿ ಉಳಿದಿರುವ 14 ಕ್ಷೇತ್ರಗಳ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಹಂಚಿಕೆ ಮಾಡಿದ್ದಾರೆ. ಅದರಂತೆ 14 ಲೋಕಸಭಾ ಕ್ಷೇತ್ರಗಳಿಗೆ(14 Lok Sabha Constituencies) 14 ಸಚಿವರ ನಿಯೋಜನೆ ಮಾಡಲಾಗಿದ್ದು,  ಈಗಿರುವ ಉಸ್ತುವಾರಿಗಳ ಜೊತೆಗೆ ಮತ್ತೊಬ್ಬ ಸಚಿವರನ್ನ ಡಿಕೆಶಿ ನೇಮಕ ಮಾಡಿದ್ದಾರೆ. ಅದರಂತೆ ನಾಳೆಯಿಂದಲೇ ಬಾಕಿ ಉಳಿದಿರುವ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದ ತಂತ್ರಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಅಲ್ಲದೆ ಈಗ ಮುಕ್ತಾಯ ಆಗಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೈ ಶಾಸಕರಿಗೂ ಈ ಜವಾಬ್ದಾರಿ ನೀಡಲಾಗಿದೆ. ಇದರ ಜೊತೆಗೆ ಸಮುದಾಯವಾರು, ಪ್ರಭಾವಿ ನಾಯಕರನ್ನೂ ಸಹ ಮತ ಸೆಳೆಯಲು ಬಳಕೆ ಮಾಡಿಕೊಳ್ಳಲಾಗಿದೆ. ಆಯಾ ಸಮುದಾಯಗಳ ಮತ ಸೆಳೆಯಲು ಅದೇ ಸಮುದಾಯ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ಈ ಮೂಲಕ ಬಾಕಿ ಉಳಿದಿರುವ 14 ಲೋಕಸಭಾ ಕ್ಷೇತ್ರದಲ್ಲಿ ರಣತಂತ್ರ ರೂಪಿಸಲಾಗಿದೆ.

ಇದನ್ನೂ ವೀಕ್ಷಿಸಿ:  Lok Sabha elections 2024: 14 ಲೋಕಸಭಾ ಕ್ಷೇತ್ರದಲ್ಲಿನ ಮತದಾನ ಅಂತ್ಯ, ಮತಯಂತ್ರಗಳಲ್ಲಿ 247 ಅಭ್ಯರ್ಥಿಗಳ ಭವಿಷ್ಯ ಭದ್ರ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!