ಬೆಂಗಳೂರು(ಮಾ.28): ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಾಗೆ ಐಟಿ ಇಲಾಖೆ ನೋಟಿಸ್ ನೀಡಿದೆ. ಆಕ್ರಮಮ ಆಸ್ತಿ ಗಳಿಕೆ ಆರೋಪಡಿ ನೋಟಿಸ್ ನೀಡಿದೆ. ಇತ್ತ ಪುತ್ರ ರೇವಣ್ಣ ಕೆಂಡಾಮಂಡಲರಾಗಿದ್ದರೆ, ಹೆಚ್ ಡಿ ಕುಮಾರಸ್ವಾಮಿ ತಕ್ಕ ತಿರುಗೇಟು ನೀಡಿದ್ದಾರೆ. ದೇವೇಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ನೀಡಿದವರಲ್ಲ. ಗೌಡರ ಕುಟುಂಬ ತೆರೆದ ಪುಸ್ತಕ. ನೋಟಿಸ್ನಿಂದ ತಲೆಕೆಡಿಸಿಕೊಳ್ಳಬೇಕಿಲ್ಲ. ಇದನ್ನು ರಾಜಕೀಯಕ್ಕೆ ಬಳಕೆ ಮಾಡುವ ಅವಶ್ಯಕತೆಯೂ ಇಲ್ಲ. ನೋಟಿಸ್ಗೆ ಉತ್ತರ ನೀಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.