ನಿಮಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಶೆಟ್ಟರ್‌, ಸವದಿ ವಿರುದ್ಧ ಯತ್ನಾಳ್ ಕೆಂಡ

ನಿಮಗೆಲ್ಲಾ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಶೆಟ್ಟರ್‌, ಸವದಿ ವಿರುದ್ಧ ಯತ್ನಾಳ್ ಕೆಂಡ

Published : Apr 16, 2023, 06:18 PM IST

ಬಿಜೆಪಿಯಿಂದ ಸಚಿವ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ಗೆ ಹೋಗ್ತಿರಲ್ಲಾ, ನಿಮಗೆ ಮಾನ ಮರ್ಯಾದೆ, ಸ್ವಾಭಿಮಾನ ಇದೆಯಾ? ಎಂದು ಯತ್ನಾಳ್‌ ಕಿಡಿಕಾರಿದರು.

ವಿಜಯಪುರ (ಏ.16): ನೀವೆಲ್ಲಾ ಅಯೋಧ್ಯೆ, ಹಿಂದುತ್ವದ ಬಗ್ಗೆ ಮಾತನಾಡುತ್ತಿದ್ದ ನಿಮ್ಮನ್ನು ಬಿಜೆಪಿ ಸಚಿವರನ್ನಾಗಿ, ಉಪ‌ಮಖ್ಯಮಂತ್ರಿಗಳನ್ನಾಗಿ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್ ಗೆ ಹೋಗ್ತಿರಲ್ಲಾ, ನಿಮಗೆ ಮಾನ ಮರ್ಯಾದೆ, ಸ್ವಾಭಿಮಾನ ಇದೆಯಾ? ಎಂದು ಪರೋಕ್ಷವಾಗಿ ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ್ ವಿರುದ್ಧ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಟಾಂಗ್ ನೀಡಿದರು. 

ಬಿಜೆಪಿ ಸರ್ಕಾರ ದಲಿತರಿಗೆ, ಮುಸ್ಲಿಂರಿಗೆ, ಮರಾಠರಿಗೆ, ಬ್ರಾಹ್ಮಣರಿಗೆ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಅನುಕೂಲ ಮಾಡಿದೆ. ಎಸ್ ಡಿ ಪಿ ಐ ಸಂಘಟನೆ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಗೆ ಹೋಗಲು ನಿಮಗೆ ನಾಚಿಕೆ ಬರುತ್ತೋ ಇಲ್ವೊ ಎಂದರು. ಲಿಂಗಾಯತರ ಕಡೆಗಣನೆ ಆಗಿದೆ ಎಂದು ನೀವು ನಿಮ್ಮ ಸ್ವಾರ್ಥಕ್ಕಾಗಿ ಹೇಳ್ತಿದ್ದಿರಿ. ನಮ್ಮ ದೇಶ, ನಮ್ಮ ಸಿದ್ದಾಂತ, ನಮ್ಮ‌ ಪ್ರಮಾಣಿಕತೆ ಇದೆಲ್ಲ ನಿಮಗೆ ಇಲ್ಲ. ಪಕ್ಷಕ್ಕೆ ಅನ್ಯಾಯ ಮಾಡ್ತಿದ್ದಿರಿ, ದೇವರು ನಿಮಗೆ ಒಳ್ಳೇದು ಮಾಡಲ್ಲಾ ಎಂದು ಕಿಡಿಕಾರಿದರು.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ