ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

Published : Apr 10, 2023, 11:46 PM IST

ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಗಳು ಸ್ಪರ್ಧಿಸುವ ಮತ್ತೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದೆ.

ಪಕ್ಷದ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿ ನಾಯಕರಿಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಪಕ್ಷದ ಹಿರಿಯ ನಾಯಕರಿಗೆ ಅವರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಯ ದೊಡ್ಡ ನಾಯಕರು ಚುನಾವಣೆಗೆ ನಿಂತ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಅಶ್ವಥ್‌ ನಾರಾಯಣ್‌ಗೆ ಮಲ್ಲೇಶ್ವರದ ಜೊತೆ ಚೆನ್ನಪಟ್ಟಣದಲ್ಲಿ, ಸೋಮಣ್ಣಗೆ ಗೋವಿಂದರಾಜನಗರದೊಂದಿಗೆ ವರುಣಾದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವರು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಬಿಜೆಪಿ ಹೈಕಮಾಂಡ್‌ ಚಿಂತನೆಯಾಗಿದೆ. ಇನ್ನು ಹಿರಿಯ ನಾಯಕರು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ, ಒಂದು ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ತಮ್ಮದೇ ಕುಟುಂಬ ಸದಸ್ಯರು ಅಥವಾ ಸುಲಭವಾಗಿ ಗೆಲ್ಲುವ ಅಭ್ಯರ್ಥಿಗೆ ಕೊಟ್ಟು ಗೆಲ್ಲಿಸಿಕೊಳ್ಳುವುದು ಬಿಜೆಪಿ ಹೈಕಮಾಂಡ್‌ ತಂತ್ರವಾಗಿದೆ. ಆದರೆ, ಬಿಜೆಪಿ ನಾಯಕರ ಈ ತಂತ್ರದಿಂದ ರಾಜ್ಯದ  ಹಿರಿಯ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!