ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

Published : Apr 10, 2023, 11:46 PM IST

ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಗಳು ಸ್ಪರ್ಧಿಸುವ ಮತ್ತೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದೆ.

ಪಕ್ಷದ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿ ನಾಯಕರಿಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಪಕ್ಷದ ಹಿರಿಯ ನಾಯಕರಿಗೆ ಅವರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಯ ದೊಡ್ಡ ನಾಯಕರು ಚುನಾವಣೆಗೆ ನಿಂತ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಅಶ್ವಥ್‌ ನಾರಾಯಣ್‌ಗೆ ಮಲ್ಲೇಶ್ವರದ ಜೊತೆ ಚೆನ್ನಪಟ್ಟಣದಲ್ಲಿ, ಸೋಮಣ್ಣಗೆ ಗೋವಿಂದರಾಜನಗರದೊಂದಿಗೆ ವರುಣಾದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವರು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಬಿಜೆಪಿ ಹೈಕಮಾಂಡ್‌ ಚಿಂತನೆಯಾಗಿದೆ. ಇನ್ನು ಹಿರಿಯ ನಾಯಕರು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ, ಒಂದು ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ತಮ್ಮದೇ ಕುಟುಂಬ ಸದಸ್ಯರು ಅಥವಾ ಸುಲಭವಾಗಿ ಗೆಲ್ಲುವ ಅಭ್ಯರ್ಥಿಗೆ ಕೊಟ್ಟು ಗೆಲ್ಲಿಸಿಕೊಳ್ಳುವುದು ಬಿಜೆಪಿ ಹೈಕಮಾಂಡ್‌ ತಂತ್ರವಾಗಿದೆ. ಆದರೆ, ಬಿಜೆಪಿ ನಾಯಕರ ಈ ತಂತ್ರದಿಂದ ರಾಜ್ಯದ  ಹಿರಿಯ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್