ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

Published : Apr 10, 2023, 11:46 PM IST

ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಗಳು ಸ್ಪರ್ಧಿಸುವ ಮತ್ತೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದೆ.

ಪಕ್ಷದ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿ ನಾಯಕರಿಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಪಕ್ಷದ ಹಿರಿಯ ನಾಯಕರಿಗೆ ಅವರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಯ ದೊಡ್ಡ ನಾಯಕರು ಚುನಾವಣೆಗೆ ನಿಂತ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಅಶ್ವಥ್‌ ನಾರಾಯಣ್‌ಗೆ ಮಲ್ಲೇಶ್ವರದ ಜೊತೆ ಚೆನ್ನಪಟ್ಟಣದಲ್ಲಿ, ಸೋಮಣ್ಣಗೆ ಗೋವಿಂದರಾಜನಗರದೊಂದಿಗೆ ವರುಣಾದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವರು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಬಿಜೆಪಿ ಹೈಕಮಾಂಡ್‌ ಚಿಂತನೆಯಾಗಿದೆ. ಇನ್ನು ಹಿರಿಯ ನಾಯಕರು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ, ಒಂದು ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ತಮ್ಮದೇ ಕುಟುಂಬ ಸದಸ್ಯರು ಅಥವಾ ಸುಲಭವಾಗಿ ಗೆಲ್ಲುವ ಅಭ್ಯರ್ಥಿಗೆ ಕೊಟ್ಟು ಗೆಲ್ಲಿಸಿಕೊಳ್ಳುವುದು ಬಿಜೆಪಿ ಹೈಕಮಾಂಡ್‌ ತಂತ್ರವಾಗಿದೆ. ಆದರೆ, ಬಿಜೆಪಿ ನಾಯಕರ ಈ ತಂತ್ರದಿಂದ ರಾಜ್ಯದ  ಹಿರಿಯ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!