ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

Published : Apr 10, 2023, 11:46 PM IST

ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಗಳು ಸ್ಪರ್ಧಿಸುವ ಮತ್ತೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದೆ.

ಪಕ್ಷದ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿ ನಾಯಕರಿಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಪಕ್ಷದ ಹಿರಿಯ ನಾಯಕರಿಗೆ ಅವರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಯ ದೊಡ್ಡ ನಾಯಕರು ಚುನಾವಣೆಗೆ ನಿಂತ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಅಶ್ವಥ್‌ ನಾರಾಯಣ್‌ಗೆ ಮಲ್ಲೇಶ್ವರದ ಜೊತೆ ಚೆನ್ನಪಟ್ಟಣದಲ್ಲಿ, ಸೋಮಣ್ಣಗೆ ಗೋವಿಂದರಾಜನಗರದೊಂದಿಗೆ ವರುಣಾದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವರು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಬಿಜೆಪಿ ಹೈಕಮಾಂಡ್‌ ಚಿಂತನೆಯಾಗಿದೆ. ಇನ್ನು ಹಿರಿಯ ನಾಯಕರು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ, ಒಂದು ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ತಮ್ಮದೇ ಕುಟುಂಬ ಸದಸ್ಯರು ಅಥವಾ ಸುಲಭವಾಗಿ ಗೆಲ್ಲುವ ಅಭ್ಯರ್ಥಿಗೆ ಕೊಟ್ಟು ಗೆಲ್ಲಿಸಿಕೊಳ್ಳುವುದು ಬಿಜೆಪಿ ಹೈಕಮಾಂಡ್‌ ತಂತ್ರವಾಗಿದೆ. ಆದರೆ, ಬಿಜೆಪಿ ನಾಯಕರ ಈ ತಂತ್ರದಿಂದ ರಾಜ್ಯದ  ಹಿರಿಯ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!