ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

ಬಿಜೆಪಿ ಹಿರಿಯ ನಾಯಕರಿಗೆ ಡಬಲ್‌ ಟೆನ್ಶನ್‌! ಎರಡೂ ಕ್ಷೇತ್ರದಲ್ಲಿ ಸ್ಫರ್ಧಿಸಲು ಸೂಚನೆ

Published : Apr 10, 2023, 11:46 PM IST

ಬಿಜೆಪಿಯ ಹಿರಿಯ ನಾಯಕರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಗಳು ಸ್ಪರ್ಧಿಸುವ ಮತ್ತೊಂದು ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಹೈಕಮಾಂಡ್‌ ಸೂಚಿಸಿದೆ.

ಪಕ್ಷದ ಆಂತರಿಕ ಮಾಹಿತಿಗಳ ಪ್ರಕಾರ ಬಿಜೆಪಿ ನಾಯಕರಿಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಪಕ್ಷದ ಹಿರಿಯ ನಾಯಕರಿಗೆ ಅವರು ಈಗಾಗಲೇ ಗೆಲ್ಲುತ್ತಿರುವ ಕ್ಷೇತ್ರದೊಂದಿಗೆ ಎದುರಾಳಿಯ ದೊಡ್ಡ ನಾಯಕರು ಚುನಾವಣೆಗೆ ನಿಂತ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ ಸೂಚನೆ ನೀಡಿದೆ ಎನ್ನಲಾಗಿದೆ. ಅಶ್ವಥ್‌ ನಾರಾಯಣ್‌ಗೆ ಮಲ್ಲೇಶ್ವರದ ಜೊತೆ ಚೆನ್ನಪಟ್ಟಣದಲ್ಲಿ, ಸೋಮಣ್ಣಗೆ ಗೋವಿಂದರಾಜನಗರದೊಂದಿಗೆ ವರುಣಾದಲ್ಲಿ ಸ್ಪರ್ಧೆ ಮಾಡುವಂತೆ ಸೂಚನೆ ನೀಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಅವರು ಗೆಲ್ಲುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಬಿಜೆಪಿ ಹೈಕಮಾಂಡ್‌ ಚಿಂತನೆಯಾಗಿದೆ. ಇನ್ನು ಹಿರಿಯ ನಾಯಕರು ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ನಂತರ, ಒಂದು ಕ್ಷೇತ್ರವನ್ನು ಉಪ ಚುನಾವಣೆಯಲ್ಲಿ ತಮ್ಮದೇ ಕುಟುಂಬ ಸದಸ್ಯರು ಅಥವಾ ಸುಲಭವಾಗಿ ಗೆಲ್ಲುವ ಅಭ್ಯರ್ಥಿಗೆ ಕೊಟ್ಟು ಗೆಲ್ಲಿಸಿಕೊಳ್ಳುವುದು ಬಿಜೆಪಿ ಹೈಕಮಾಂಡ್‌ ತಂತ್ರವಾಗಿದೆ. ಆದರೆ, ಬಿಜೆಪಿ ನಾಯಕರ ಈ ತಂತ್ರದಿಂದ ರಾಜ್ಯದ  ಹಿರಿಯ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!