ದಲಿತರು, ಹಿಂದುಳಿದವರನ್ನು ದೂರವಿಟ್ಟಿದೆಯಾ RSS.? ಡಾ. ಜಿಬಿ ಹರೀಶ್

Jun 6, 2022, 5:45 PM IST

ಆರ್‌ಎಸ್‌ಎಸ್‌ನವರು (RSS) ಹೊರಗಿನಿಂದ ಬಂದವರು, ಮಾಜಿ ಪ್ರಧಾನಿ ಜವಾಹರ್‌ಲಾಲ್‌ ನೆಹರುಗೆ ಮತ್ತು ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಹೋಲಿಕೆ ಸರಿಯಲ್ಲ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟು ಹಾಕಿದೆ.

'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ..? ಸಿದ್ದರಾಮಯ್ಯ

ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ದ್ರಾವಿಡರೇ ಅಥವಾ ಆರ್ಯರೇ ಎಂಬುದಕ್ಕೆ ಮೊದಲು ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಇಂತಹ ಸಮಯದಲ್ಲಿ ಹೆಚ್ಚಾಗಿ ಕೇಳಿ ಬರುವ ಹೆಸರು ಆರ್‌ಎಸ್‌ಎಸ್‌. ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಮಾತನಾಡುವಾಗ ಆರ್‌ಎಸ್‌ಎಸ್‌ ಅಜೆಂಡಾ ಎನ್ನುತ್ತಾರೆ. ಹಾಗಾದರೆ ಆರ್‌ಎಸ್‌ಎಸ್‌ ಅಜೆಂಡಾ ಏನು..? ಆರ್‌ಎಸ್‌ಎಸ್ ಪ್ರಕಾರ ಹಿಂದೂ ಧರ್ಮದ ವ್ಯಾಖ್ಯಾನ ಏನು..? ಹೀಗೆ ಸಾಕಷ್ಟು ಪ್ರಶ್ನೆಗಳಿವೆ. ಈ ಎಲ್ಲಾ ಪ್ರಶ್ನೆಗಳಿಗೆ ನ್ಯೂಸ್ ಅವರ್ ಸ್ಪೆಷಲ್‌ನಲ್ಲಿ ಡಾ. ಜಿ ಬಿ ಹರೀಶ್ ಉತ್ತರಿಸುತ್ತಾರೆ. 

'ನಾನು ಹೇಳಿದ್ದು ತಪ್ಪು ಅನ್ನೋಕೆ ಪ್ರತಾಪ್ ಸಿಂಹ ಆರ್ಥಿಕ ತಜ್ಞನೇನ್ರಿ..? ಸಿದ್ದರಾಮಯ್ಯ