ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿಸಿದ್ದೇನೆ: ಟಿಕೆಟ್‌ ಆಕಾಂಕ್ಷಿ ಡಾ.ಸುಶ್ರುತ್ ಗೌಡ

Published : Dec 21, 2023, 11:56 AM IST

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈಸೂರಿನಲ್ಲಿ ಅಖಾಡ ರಂಗೇರುತ್ತಿದೆ. ಈಗಾಗಲೇ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಆ್ಯಕ್ಟೀವ್ ಆಗಿದ್ದಾರೆ.
 

ಚುನಾವಣೆ ಹತ್ತಿರವಾಗ್ತಿದ್ದಂತೆ ಮೈಸೂರು ಅಖಾಡ ರಂಗೇರುತ್ತಿದೆ. ಕಾಂಗ್ರೆಸ್‌ನಲ್ಲಿ(Congress) ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿರುವ ಆಕಾಂಕ್ಷಿತರು. ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಕಾಂಗ್ರೆಸ್ ಟಿಕೆಟ್(Ticket) ಆಕಾಂಕ್ಷಿ ಡಾ. ಸುಶ್ರುತ್ ಗೌಡ, ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದ್ದಾರೆ. ಪಾಲಿಕೆ ಮತ್ತು ಗೋಪಾಲಗೌಡ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಸಲಾಗಿದೆ. ನೂರಕ್ಕೆ ನೂರು ನಾನು ಆಕಾಂಕ್ಷಿ ಎಂದ ಡಾ. ಸುಶ್ರುತ್ ಗೌಡ(Dr.Sushrut Gowda). ನಾನು 25 ವರ್ಷ ಎಲೆಮರೆ ಕಾಯಿಯಂತೆ ಪಕ್ಷಕ್ಕೆ ದುಡಿದಿದ್ದೇನೆ. ವೈದ್ಯನಾಗಿ 18 ವರ್ಷ ವಿದೇಶದಲ್ಲಿ ಕೆಲಸ ಮಾಡಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೆಲಸ ಮಾಡಿದ್ದೇನೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದ ಏಕೈಕ ಒಕ್ಕಲಿಗ ವೈದ್ಯ ನಾನು ಎಂದು ಹೇಳುವ ಮೂಲಕ ಕ್ಷೇತ್ರದಲ್ಲಿ ಒಕ್ಕಲಿಗ ಅಸ್ತ್ರವನ್ನು ಸುಶ್ರುತ್‌ ಪ್ರಯೋಗ ಮಾಡಿದ್ದಾರೆ. ನನ್ನನ್ನೂ ಸೇರಿ ಪಕ್ಷದಲ್ಲಿ 16 ಜನ ಆಕಾಂಕ್ಷೆಗಳು ಇದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಬಿಜೆಪಿ ಭದ್ರಕೋಟೆಯನ್ನ ಈ ಬಾರಿ‌ ಛಿದ್ರ ಮಾಡುತ್ತೇವೆ ಎಂದು ಡಾ. ಸುಶ್ರುತ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಇನ್ನೂ ಒಂದು ವಾರ ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಳಂಬ: ಡಿಕೆಶಿ ಒತ್ತಡಕ್ಕೆ ಮಣಿದು ರಾಹುಲ್ ಈ ಸೂಚನೆ ನೀಡಿದ್ರಾ..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more