ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

ಗೊರವಯ್ಯ ಭವಿಷ್ಯವಾಣಿ ಪ್ರಕಾರ ನಾನು 5 ವರ್ಷ ಸಿಎಂ ಆಗೋದು ಖಚಿತ; ಎಚ್‌ಡಿಕೆ ವಿಶ್ವಾಸ

Published : Feb 25, 2022, 11:55 AM IST

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ಎಚ್‌ಡಿ ಕುಮಾರಸ್ವಾಮಿ  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು, (ಫೆ.25): ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಮೈಲಾರದ ಕಾರ್ಣಿಕ ವಾಣಿಯನ್ನು ವಿಶ್ಲೇಷಿಸಿದ್ದು, ನೈರುತ್ಯ ಭಾಗದ ಪ್ರಭಾವಿ ಮುಖಂಡ ಮುಂದೆ ರಾಜ್ಯವನ್ನಾಳುತ್ತಾನೆ. ಕುಬೇರನ ಸ್ಥಾನದಲ್ಲಿರುವ ವ್ಯಕ್ತಿ ಮುಂದಿನ ರಾಜಕಾರಣ ಮಾಡ್ತಾನೆ. ಅವರ ಅವಧಿಯಲ್ಲಿ ರಾಜ್ಯದ ಜನರು ಸಂಪನ್ನರಾಗುತ್ತಾರೆ. ಸುಖ ಶಾಂತಿ ಸಂಪತ್ತು ನೀಡುವ ರಾಜಕಾರಣಿ ಬರ್ತಾನೆ. ಮುಂಬರುವ ಸರ್ಕಾರ ಐದು ವರ್ಷಗಳ ಕಾಲ ಸಂಪತ್ಪರಿತವಾಗಿ ಇರುತ್ತದೆ ಎಂದಿದ್ದಾರೆ.

ಮೈಲಾರ ಕಾರ್ಣಿಕ ವಿಶ್ಲೇಷಣೆ: ನೈಋತ್ಯ ಭಾಗದ ಪ್ರಭಾವಿ ರಾಜ್ಯಭಾರ ಮಾಡಲಿದ್ದಾರೆ, ಯಾರು ಅವರು?

 ಮೈಲಾರದ ಕಾರ್ಣಿಕ ವಾಣಿ ವಿಶ್ಲೇಷಿಸಿದಂತೆ, ಕರ್ನಾಟಕದ ನೈಋತ್ಯ ಭಾಗವೆಂದರೆ ಹಳೇ ಮೈಸೂರು ಭಾಗ. ಸದ್ಯ ಈ ಭಾಗದ ಪ್ರಭಾವಿ ವ್ಯಕ್ತಿಗಳೆಂದರೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ. ಕುಮಾರಸ್ವಾಮಿ. ಈಗಾಗಲೇ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಪೈಪೋಟಿ ಶುರುವಾಗಿದೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರೂ ಇಲ್ಲ.

ಈ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು,  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದು ನಾನು ಮತ್ತೆ ಮುಖ್ಯಮಂತ್ರಿಯಾಗೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more