ಬಂಧನದ ಭೀತಿಯಲ್ಲಿ ಕಾಂಗ್ರೆಸ್‌ ನಾಯಕ ಕೆ.ಜೆ. ಜಾರ್ಜ್‌?

Aug 28, 2020, 5:05 PM IST

ಬೆಂಗಳೂರು, (ಆ.28): ಮಡಿಕೇರಿ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಇದೀಗ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್‌ಗೆ ಸಂಕಷ್ಟ ಶುರುವಾಗಿದೆ.

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಕೆಜೆ ಜಾರ್ಜ್‌ಗೆ ಮತ್ತೆ ಸಂಕಷ್ಟ

ಈ ಪ್ರಕರಣ ಸಂಬಂಧ ಸಿಬಿಐ ಬಿ ರಿಪೋರ್ಟ್‌ ವರದಿ ನೀಡಿದ್ದನ್ನು ವಿಶೇಷ ನ್ಯಾಯಾಲಯ ತಿರಸ್ಕಾರ ಮಾಡಿದೆ. ಅಲ್ಲದೇ ಕೆ.ಜೆ.ಜಾರ್ಜ್‌ ಸೇರಿದಂತೆ ಇತರೆ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸಹ ಜಾರಿ ಮಾಡಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಜ್ ಬಂಧನವಾದರೂ ಅಚ್ಚರಿ ಪಡಬೇಕಿಲ್ಲ.