ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ, ತನಿಖೆಗೆ ಆದೇಶಿಸಿದ ಸಿಎಂ ಬೊಮ್ಮಾಯಿ!

Aug 19, 2022, 10:41 PM IST

ಸಿದ್ದರಾಮಯ್ಯನವರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ. ಇಷ್ಟೇ ಅಲ್ಲ ಈ ಘಟನೆಯನ್ನು ಖಂಡಿಸಿದ್ದಾರೆ.  ಇತ್ತ ಸಿದ್ದರಾಮಯ್ಯ ಟೆಂಪಲ್ ರನ್ ಆರಂಭಿಸಿದ್ದಾರೆ. ಇಂದು ಶೃಂಗೇರಿ ಮಠ, ರಂಭಾಪುರಿ ಪೀಠ ಸೇರಿದಂತೆ ಹಲವು ಧಾರ್ಮಿಕ ಕೇಂದ್ರಗಳಿಗೆ ಸಿದ್ದರಾಮಯ್ಯ ಸಂದರ್ಶಿಸಿದ್ದಾರೆ. ಈ ವೇಳೆ ರಂಭಾಪುರಿ ಮಠದಲ್ಲಿ ಧರ್ಮ ಒಡೆಯುವ ಯತ್ನ ಮಾಡಿದ್ದು ತಪ್ಪಾಗಿದೆ ಎಂದು ಪಶ್ಚಾತ್ಪಾ ಪಟ್ಟಿದ್ದಾರೆ. ಇದು ರಾಜಕೀಯ ಸಂಚಲನ ಸೃಷ್ಟಿಸಿದೆ. ಧರ್ಮ ಒಡೆಯುವ ಯಾವುದೇ ಉದ್ದೇಶ ನನಗೆ ಇರಲಿಲ್ಲ. ಯಾರದೋ ಮಾತಿನಿಂದ ತಪ್ಪಾಗಿದೆ. ಇನ್ಯಾವತ್ತೂ ಈ ರೀತಿಯ ಕೆಲಸಕ್ಕೆ ಕೈ ಹಾಕಲ್ಲ ಎಂದು ಸಿದ್ದರಾಮಯ್ಯ ರಂಭಾಪುರಿ ಮಠದಲ್ಲಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ವತಃ ರಂಭಾಪರಿ ಶ್ರೀಗಳು ಮಾಹಿತಿ ಬಹಿರಂಗಪಡಿಸಿದ್ದಾರೆ.