ಅಜಿತ್ ಪವಾರ್ ಎಂಟ್ರಿ..ಶಿಂಧೆ ಬಣಕ್ಕೆ ಭೀತಿ: ಮೋದಿ ಭೇಟಿ ಮಾಡಿದ ಏಕನಾಥ್‌ ಶಿಂಧೆ !

ಅಜಿತ್ ಪವಾರ್ ಎಂಟ್ರಿ..ಶಿಂಧೆ ಬಣಕ್ಕೆ ಭೀತಿ: ಮೋದಿ ಭೇಟಿ ಮಾಡಿದ ಏಕನಾಥ್‌ ಶಿಂಧೆ !

Published : Aug 14, 2023, 12:01 PM IST

ಗೆಲ್ಲುವವರಿಗೆ ಮಾತ್ರ ಟಿಕೆಟ್ ಕೊಡುತ್ತೇವೆ ಅಂದರೆ ಏನು ಮಾಡುವುದು? 
ವಾಪಸ್ ಉದ್ಧವ್ ಠಾಕ್ರೆ ಬಳಿ ಹೋಗುವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ
ರಾಜಕೀಯ ತೊಳಲಾಟದ ನಡುವೆ ಪ್ರಧಾನಿಯನ್ನೇ ಭೇಟಿ ಮಾಡಿದ ಶಿಂಧೆ

ಅಜಿತ್ ಪವಾರ್ ಡಿಸಿಎಂ ಹುದ್ದೆ ಏರಿದ ಬಳಿಕ ಶಿಂಧೆ ಬಣಕ್ಕೆ ಟೆನ್ಷನ್ ಶುರುವಾದಂತೆ ಕಾಣುತ್ತಿದೆ. ಹೀಗಾಗಿ ಏಕನಾಥ್‌ ಶಿಂಧೆ(Eknath Shinde) ನೇರವಾಗಿ ಪ್ರಧಾನಿ ಮೋದಿಯನ್ನೇ(Modi) ಭೇಟಿ ಮಾಡಿದ್ದಾರೆ. ಫಡ್ನವೀಸ್, ಅಮಿತ್ ಶಾ(Amit Shah) ಬಿಟ್ಟು ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೋದಿ ಮುಂದೆ ತಮ್ಮ ಮನದ ಬೇಗುದಿಯನ್ನು ಏಕನಾಥ್ ಶಿಂಧೆ ಹೇಳಿಕೊಂಡಿದ್ದಾರೆ. ಶಿಂಧೆ ಬಣ ಶಿವಸೇನೆ ತೊರೆಯಲು ಕಾರಣವಾಗಿದ್ದೇ ಅಜಿತ್ ಪವಾರ್ ಎನ್ನಲಾಗ್ತಿದೆ. ಅಘಾಡಿ ಸರ್ಕಾರದಲ್ಲಿ ಅಜಿತ್ ಪವಾರ್‌ ಶಿವಸೇನೆಗೆ ಕ್ಯಾರೇ ಎನ್ನುತ್ತಿರಲಿಲ್ಲ. ಇದೇ ಕಾರಣಕ್ಕೆ ಸರ್ಕಾರ, ಪಕ್ಷ ತೊರೆದು ಬಂದಿದ್ದ ಏಕನಾಥ್ ಶಿಂಧೆ ಟೀಂ, ಈಗ ಅದೇ ಅಜಿತ್ ದಾದಾ ಪವಾರ್ ಕರೆತಂದು ಡಿಸಿಎಂ ಮಾಡಿದೆ. ಮುಂದೆ ಚುನಾವಣೆ ಹೊತ್ತಲ್ಲಿ ತಮ್ಮನ್ನೇ ದೂರ ಮಾಡಿದ್ರೆ ಎನ್ನುವ ಆತಂಕ ಹಾಗೂ ಕೊನೆಯ 6 ತಿಂಗಳು ಅಜಿತ್‌ ಪವಾರ್‌ರನ್ನು ಸಿಎಂ ಮಾಡಿದ್ರೆ ಎನ್ನುವ ಟೆನ್ಷನ್ ಶುರುವಾದಂತೆ ಕಾಣುತ್ತಿದೆ. 2024ರಲ್ಲಿ ಅಜಿತ್ ಪವಾರ್ ಜೊತೆ ಸೇರಿ ಬಿಜೆಪಿ ತಮ್ಮನ್ನು ದೂರ ಇಟ್ಟರೆ ಎಂಬ ಆತಂಕ ಸಹ ಶಿಂಧೆ ಬಣಕ್ಕೆ ಕಾಡತೊಡಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more