ಅಜಿತ್ ಪವಾರ್ ಎಂಟ್ರಿ..ಶಿಂಧೆ ಬಣಕ್ಕೆ ಭೀತಿ: ಮೋದಿ ಭೇಟಿ ಮಾಡಿದ ಏಕನಾಥ್‌ ಶಿಂಧೆ !

ಅಜಿತ್ ಪವಾರ್ ಎಂಟ್ರಿ..ಶಿಂಧೆ ಬಣಕ್ಕೆ ಭೀತಿ: ಮೋದಿ ಭೇಟಿ ಮಾಡಿದ ಏಕನಾಥ್‌ ಶಿಂಧೆ !

Published : Aug 14, 2023, 12:01 PM IST

ಗೆಲ್ಲುವವರಿಗೆ ಮಾತ್ರ ಟಿಕೆಟ್ ಕೊಡುತ್ತೇವೆ ಅಂದರೆ ಏನು ಮಾಡುವುದು? 
ವಾಪಸ್ ಉದ್ಧವ್ ಠಾಕ್ರೆ ಬಳಿ ಹೋಗುವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ
ರಾಜಕೀಯ ತೊಳಲಾಟದ ನಡುವೆ ಪ್ರಧಾನಿಯನ್ನೇ ಭೇಟಿ ಮಾಡಿದ ಶಿಂಧೆ

ಅಜಿತ್ ಪವಾರ್ ಡಿಸಿಎಂ ಹುದ್ದೆ ಏರಿದ ಬಳಿಕ ಶಿಂಧೆ ಬಣಕ್ಕೆ ಟೆನ್ಷನ್ ಶುರುವಾದಂತೆ ಕಾಣುತ್ತಿದೆ. ಹೀಗಾಗಿ ಏಕನಾಥ್‌ ಶಿಂಧೆ(Eknath Shinde) ನೇರವಾಗಿ ಪ್ರಧಾನಿ ಮೋದಿಯನ್ನೇ(Modi) ಭೇಟಿ ಮಾಡಿದ್ದಾರೆ. ಫಡ್ನವೀಸ್, ಅಮಿತ್ ಶಾ(Amit Shah) ಬಿಟ್ಟು ಮೋದಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೋದಿ ಮುಂದೆ ತಮ್ಮ ಮನದ ಬೇಗುದಿಯನ್ನು ಏಕನಾಥ್ ಶಿಂಧೆ ಹೇಳಿಕೊಂಡಿದ್ದಾರೆ. ಶಿಂಧೆ ಬಣ ಶಿವಸೇನೆ ತೊರೆಯಲು ಕಾರಣವಾಗಿದ್ದೇ ಅಜಿತ್ ಪವಾರ್ ಎನ್ನಲಾಗ್ತಿದೆ. ಅಘಾಡಿ ಸರ್ಕಾರದಲ್ಲಿ ಅಜಿತ್ ಪವಾರ್‌ ಶಿವಸೇನೆಗೆ ಕ್ಯಾರೇ ಎನ್ನುತ್ತಿರಲಿಲ್ಲ. ಇದೇ ಕಾರಣಕ್ಕೆ ಸರ್ಕಾರ, ಪಕ್ಷ ತೊರೆದು ಬಂದಿದ್ದ ಏಕನಾಥ್ ಶಿಂಧೆ ಟೀಂ, ಈಗ ಅದೇ ಅಜಿತ್ ದಾದಾ ಪವಾರ್ ಕರೆತಂದು ಡಿಸಿಎಂ ಮಾಡಿದೆ. ಮುಂದೆ ಚುನಾವಣೆ ಹೊತ್ತಲ್ಲಿ ತಮ್ಮನ್ನೇ ದೂರ ಮಾಡಿದ್ರೆ ಎನ್ನುವ ಆತಂಕ ಹಾಗೂ ಕೊನೆಯ 6 ತಿಂಗಳು ಅಜಿತ್‌ ಪವಾರ್‌ರನ್ನು ಸಿಎಂ ಮಾಡಿದ್ರೆ ಎನ್ನುವ ಟೆನ್ಷನ್ ಶುರುವಾದಂತೆ ಕಾಣುತ್ತಿದೆ. 2024ರಲ್ಲಿ ಅಜಿತ್ ಪವಾರ್ ಜೊತೆ ಸೇರಿ ಬಿಜೆಪಿ ತಮ್ಮನ್ನು ದೂರ ಇಟ್ಟರೆ ಎಂಬ ಆತಂಕ ಸಹ ಶಿಂಧೆ ಬಣಕ್ಕೆ ಕಾಡತೊಡಗಿದೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  ಉದ್ಯಮಿ ಮನೆಯಲ್ಲಿ ಶರದ್-ಅಜಿತ್ ಪವಾರ್ ಸಭೆ: ಈ ಭೇಟಿ ಹಿಂದಿನ ರಹಸ್ಯವೇನು..?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more