Ground Report:  ಕೋಟೆನಾಡಿನಲ್ಲಿ ಚುನಾವಣೆಯ ಕಾವು ಜೋರು

Ground Report: ಕೋಟೆನಾಡಿನಲ್ಲಿ ಚುನಾವಣೆಯ ಕಾವು ಜೋರು

Published : Dec 01, 2022, 04:54 PM IST

ಮಧ್ಯ ಕರ್ನಾಟಕದ ಚಿತ್ರದುರ್ಗ ಕಾಂಗ್ರೆಸ್‌ನ ಭದ್ರಕೋಟೆಯೆಂದೇ ಹೇಳಲಾಗುತ್ತಿತ್ತು. ಆದರೆ, ಇತ್ತೀಚೆಗೆ ಚಿತ್ರಣ ಬದಲಾಗಿದ್ದು, ಬಿಜೆಪಿ ಹೆಚ್ಚಿನ ಹಿಡಿತ ಸಾಧಿಸಿದೆ.

ಚಿತ್ರದುರ್ಗ (ಡಿ. 1): ಚುನಾವಣಾ ಮಹಾಯುದ್ಧದಲ್ಲಿ ಕೋಟೆ ಗೆಲ್ಲೋರು ಯಾರು? ಮಧ್ಯ ಕರ್ನಾಟಕದ ಚಿತ್ರದುರ್ಗ ಕಾಂಗ್ರೆಸ್‌ನ ಭದ್ರಕೋಟೆಯೆಂದೇ ಹೇಳಲಾಗುತ್ತಿತ್ತು. ಆದರೆ, ಇತ್ತೀಚೆಗೆ ಚಿತ್ರಣ ಬದಲಾಗಿದ್ದು, ಬಿಜೆಪಿ ಹೆಚ್ಚಿನ ಹಿಡಿತ ಸಾಧಿಸಿದೆ. ಈಗ ಬಿಜೆಪಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಸವಾಲು ಎದುರಾಗಿದೆ. ಚಿತ್ರದುರ್ಗದಲ್ಲಿ ತಿಪ್ಪಾರೆಡ್ಡಿ ಅವರು ಆರು ಬಾರಿ ಶಾಸಕರಾಗಿದ್ದಾರೆ. ಇನ್ನುಕಾಂಗ್ರೆಸ್‌ ಟಿಕೆಟ್‌ಗೂ ಭಾರಿ ಪೈಪೋಟಿ ನಡೆದಿದೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಹೊಳಲ್ಲೆರೆಯಲ್ಲಿ ಚಂದ್ರಪ್ಪ, ಹೆಚ್. ಆಂಜನೇಯ ಸೇರಿ ವಿವಿಧ ಘಟಾನುಘಟಿಗಳ ಸ್ಪರ್ಧೆ ಏರ್ಪಡಲಿದೆ. ಹಿರಿಯೂರು ಕ್ಷೇತ್ರ ಪುನರ್‍‌ ವಿಂಗಡಣೆ ನಂತರ ಸಾಮಾನ್ಯ ಕ್ಷೇತ್ರವಾಗಿದೆ. ಪ್ರಸ್ತುತ ಹಿರಿಯೂರಿನಲ್ಲಿ ಪೂರ್ಣಿಮಾ ಶಾಸಕಿಯಾಗಿದ್ದಾರೆ. ಆದರೆ, ಈಗ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪುತ್ರ ಬಾಲಕೃಷ್ಣ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ. ಇನ್ನು ಚಿತ್ರನಟ ಶಶಿಕುಮಾರ್‍‌ ರಘು ವಿರುದ್ಧ ಸ್ಪರ್ಧೆ ಮಾಡಲು ಚಳ್ಳಕೆರೆಗೆ ಬರುವ ಸಾಧ್ಯತೆ ತೋರುತ್ತಿದೆ. ಹೊಸದುರ್ಗದಲ್ಲಿ ಎಂದಿನಂತೆ ಗೂಳಿ ಕಾಳಗ ಮುಂದುವರೆಯಲಿದೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more