ಬಿ.ಎಲ್‌.ಸಂತೋಷ್‌ ವಿರುದ್ಧ ರೇಣುಕಾಚಾರ್ಯ ಕೆಂಡಾಮಂಡಲ: ಯಾಕೆ ಗೊತ್ತಾ?

Sep 1, 2023, 9:23 PM IST

ಬೆಂಗಳೂರು (ಸೆ.01): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನ ಜೈಲಿಗೆ ಕಳುಹಿಸಿದರು. ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ಬಿ.ಎಲ್.ಸಂತೋಷ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಎಸ್‍ವೈ ವಿರುದ್ಧ ಪಿತೂರಿ ನಡೆಸಿದ್ದೇ ಪಕ್ಷದವರು ಲೋಕಾಯುಕ್ತಕ್ಕೂ ದೂರು ಕೊಟ್ಟರು. ಯಡಿಯೂರಪ್ಪ ನಿರಪರಾಧಿ. ಲಿಂಗಾಯತರ ಬಣ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ನಾನು ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನೋಟಿಸ್ ಕೊಟ್ಟಿದ್ದಾರೆ. ಪಕ್ಷದ ಕಚೇರಿಯಿಂದ ಯಾರೋ ಕರೆ ಮಾಡಿ ಮೀಟಿಂಗ್ ಗೆ ಕರೆಯುತ್ತಾರೆ. ಬೇಷರತ್ತಾಗಿ ನೋಟಿಸ್ ವಾಪಸ್ ಪಡೆಯಲಿ ಎಂದರು. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳುತ್ತೇನೆ. ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಕೆಲಸ ಆಗ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಟ್ಟರು. ತಮ್ಮದೇ ಬಣ ಸೃಷ್ಟಿಸಿಕೊಂಡು ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ ಎಂದು ಕಿರಿಕಾರಿದರು.