ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

Published : Apr 28, 2022, 02:31 PM ISTUpdated : Apr 28, 2022, 02:50 PM IST

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. ಇದರಿಂದಾಗಿ, 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ರಾಜಕೀಯ ತಂತ್ರಗಾರಿಕೆಯನ್ನು ಪ್ರಶಾಂತ್‌ ಕಿಶೋರ್‌ ನಿರ್ವಹಿಸಿ, ಪಕ್ಷವನ್ನು ಪುಟಿದೇಳಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕತ್ವಕ್ಕೆ ಪ್ರಶಾಂತ್‌ ಕಿಶೋರ್‌ ಪ್ರಾತ್ಯಕ್ಷಿಕೆ ನೀಡಿದ್ದರು. ಆ ವೇಳೆ ಅವರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿತ್ತು. ಪ್ರಶಾಂತ್‌ ಅವರು ಈ ಆಹ್ವಾನದ ಬಗ್ಗೆ ಉತ್ಸುಕರಾಗಿದ್ದರು. ಆದರೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ ಜತೆ ಪ್ರಶಾಂತ್‌ ಅವರ ಸಂಸ್ಥೆ ಐ-ಪ್ಯಾಕ್‌ ಚುನಾವಣಾ ತಂತ್ರಗಾರಿಕೆ ಒಪ್ಪಂದ ಮಾಡಿಕೊಂಡಿತ್ತು. ಇದನ್ನು ಕಾಂಗ್ರೆಸ್‌ ನಾಯಕತ್ವ ಹಿತಾಸಕ್ತಿಗಳ ವೈರುಧ್ಯವಾಗಿ ಕಂಡಿತ್ತು. ಇದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಹೆಚ್ಚು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅಧಿಕಾರಗಳನ್ನು ತಮಗೆ ನೀಡಬೇಕು ಎಂದು ಕಿಶೋರ್‌ ಬಯಸಿದ್ದರು. ಆದರೆ ಪಕ್ಷವು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್‌ ಸೇರದಿರುವ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more