ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

ಕಾಂಗ್ರೆಸ್‌ ಸೇರಲು ತಂತ್ರಗಾರ ಪ್ರಶಾಂತ್‌ ಕಿಶೋರ್‌ ನಿರಾಕರಿಸಿದ್ದೇಕೆ..?

Published : Apr 28, 2022, 02:31 PM ISTUpdated : Apr 28, 2022, 02:50 PM IST

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. 

ಕಾಂಗ್ರೆಸ್‌ ಪಕ್ಷ ಸೇರುವಂತೆ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ನೀಡಿದ್ದ ಆಹ್ವಾನವನ್ನು ದೇಶದ ಪ್ರಸಿದ್ಧ ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌  (Prashant Kishore) ನಿರಾಕರಿಸಿದ್ದಾರೆ. ಇದರಿಂದಾಗಿ, 2024ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ರಾಜಕೀಯ ತಂತ್ರಗಾರಿಕೆಯನ್ನು ಪ್ರಶಾಂತ್‌ ಕಿಶೋರ್‌ ನಿರ್ವಹಿಸಿ, ಪಕ್ಷವನ್ನು ಪುಟಿದೇಳಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್‌ ನಾಯಕತ್ವಕ್ಕೆ ಪ್ರಶಾಂತ್‌ ಕಿಶೋರ್‌ ಪ್ರಾತ್ಯಕ್ಷಿಕೆ ನೀಡಿದ್ದರು. ಆ ವೇಳೆ ಅವರಿಗೆ ಪಕ್ಷ ಸೇರುವಂತೆ ಆಹ್ವಾನ ನೀಡಲಾಗಿತ್ತು. ಪ್ರಶಾಂತ್‌ ಅವರು ಈ ಆಹ್ವಾನದ ಬಗ್ಗೆ ಉತ್ಸುಕರಾಗಿದ್ದರು. ಆದರೆ, ತೆಲಂಗಾಣದ ಆಡಳಿತಾರೂಢ ಟಿಆರ್‌ಎಸ್‌ ಜತೆ ಪ್ರಶಾಂತ್‌ ಅವರ ಸಂಸ್ಥೆ ಐ-ಪ್ಯಾಕ್‌ ಚುನಾವಣಾ ತಂತ್ರಗಾರಿಕೆ ಒಪ್ಪಂದ ಮಾಡಿಕೊಂಡಿತ್ತು. ಇದನ್ನು ಕಾಂಗ್ರೆಸ್‌ ನಾಯಕತ್ವ ಹಿತಾಸಕ್ತಿಗಳ ವೈರುಧ್ಯವಾಗಿ ಕಂಡಿತ್ತು. ಇದಕ್ಕೆ ಕಾಂಗ್ರೆಸ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇದೇ ವೇಳೆ ಕಾಂಗ್ರೆಸ್‌ನಲ್ಲಿ ಹೆಚ್ಚು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಅಧಿಕಾರಗಳನ್ನು ತಮಗೆ ನೀಡಬೇಕು ಎಂದು ಕಿಶೋರ್‌ ಬಯಸಿದ್ದರು. ಆದರೆ ಪಕ್ಷವು ಅದಕ್ಕೆ ಒಪ್ಪಲಿಲ್ಲ. ಹೀಗಾಗಿ ಅವರು ಕಾಂಗ್ರೆಸ್‌ ಸೇರದಿರುವ ನಿರ್ಧಾರ ಕೈಗೊಂಡರು ಎಂದು ಮೂಲಗಳು ಹೇಳಿವೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more