Mar 25, 2023, 11:51 AM IST
ರಾಜ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಜ್ಜಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಇನ್ನು ಮೊದಲ ಪಟ್ಟಿಯಲ್ಲಿ ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಮಣೆ ಹಾಕಿದ್ದು, 4 ಕುಟುಂಬಗಳಿಗೆ ತಲಾ ಎರಡು ಟಿಕೆಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ವಿಜಯನಗರದಿಂದ ಎಂ.ಕೃಷ್ಣಪ್ಪ , ಅವರ ಪುತ್ರ ಪ್ರಿಯಾ ಕೃಷ್ಣಗೆ ಗೋವಿಂದರಾಜನಗರ ಟಿಕೆಟ್ ಕಣಕ್ಕಿಳಿಯಲಿದ್ದಾರೆ .ಇನ್ನೂ ಬಿಟಿಎಂ ಲೇಔಟ್ ನಿಂದ ರಾಮಲಿಂಗಾ ರೆಡ್ಡಿ ಕಣಕ್ಕಿಳಿಯಲಿದ್ದು, ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರದಿಂದ ಘೋಷಿಸಲಾಗಿದೆ . ದಾವಣಗೆರೆ ದಕ್ಷಿಣದಿಂದ ಶಾಮನೂರ ಶಿವಶಂಕರಪ್ಪ ಹಾಗೂ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ತಂದೆ- ಮಕ್ಕಳು ತಮ್ಮ ಅದೃಷ್ಟ ಪರೀಕ್ಷಿಸಿಲಿದ್ದಾರೆ.