ಲೋಕಸಭೆ ಗೆಲ್ಲೋಕೆ ಜೆಡಿಎಸ್ ಶಕ್ತಿಪ್ರದರ್ಶನ: ವಿಜಯಪುರದಲ್ಲಿ ‘ಪುನರ್‌ಚೇತನ ಪರ್ವ’ ಸಂಭ್ರಮ

ಲೋಕಸಭೆ ಗೆಲ್ಲೋಕೆ ಜೆಡಿಎಸ್ ಶಕ್ತಿಪ್ರದರ್ಶನ: ವಿಜಯಪುರದಲ್ಲಿ ‘ಪುನರ್‌ಚೇತನ ಪರ್ವ’ ಸಂಭ್ರಮ

Published : Oct 12, 2023, 10:40 AM IST

ವಿಜಯಪುರದಲ್ಲಿ ಲೋಕಸಭೆ ಫೈಟ್ ಜೋರಾಗಿದೆ. ಬಿಜೆಪಿ,ಜೆಡಿಎಸ್‌ನಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಎಂಬ ಕುತೂಹಲ ಹೆಚ್ಚಾಗಿದೆ. ಇದರ ಭಾಗವಾಗಿಯೇ ಜೆಡಿಎಸ್ ನಾಯಕರು ಅದ್ಧೂರಿ ಕಾರ್ಯಕ್ರಮದ ಮೂಲಕ ಕಾರ್ಯಕರ್ತರ ಹುರಿದುಂಬಿಸಿದ್ರೆ..ಇತ್ತ ಹಾಲಿ ಸಂಸದರು ಸೇರಿ ಬಿಜೆಪಿ ನಾಯಕರಿಗೆ ಢವಢವ ಶುರುವಾಗಿದೆ.

ಲೋಕಸಭಾ ಎಲೆಕ್ಷನ್‌ಗೆ ಕೆಲವೇ ತಿಂಗಳು ಬಾಕಿ ಇದೆ. ಈಗಾಗಲೇ ಬಿಜೆಪಿ(BJP), ಜೆಡಿಎಸ್(JDS) ದೋಸ್ತಿನೂ ಆಗೋಗಿದೆ. ಇದರ ಭಾಗವಾಗಿ ವಿಜಯಪುರದಲ್ಲಿ(Vijayapura) ಪುನರ್‌ಚೇತನ ಕಾರ್ಯಕ್ರಮದ ಮೂಲಕ  ಜೆಡಿಎಸ್ ನಾಯಕರು ಶಕ್ತಿಪ್ರದರ್ಶನ ಮಾಡಿದ್ದಾರೆ. ನಗರದ ಸಿದ್ದೇಶ್ವರ ದೇಗುಲದಿಂದ ರಾಣಿಚೆನ್ನಮ್ಮ ಹಾಲ್‌ವರೆಗೂ ಜೆಡಿಎಸ್‌ ಕಾರ್ಯಕರ್ತರು ಮೆರವಣಿಗೆ ಮಾಡಿ ಬೃಹತ್ ಸಮಾವೇಶ ನಡೆಸಿದ್ರು. ಶಾಸಕ ಜಿ.ಟಿ. ದೇವೇಗೌಡ, ಮಾಜಿ ಶಾಸಕ ವೈಎಸ್‌ವಿ ದತ್ತ, ಬಂಡೆಪ್ಪ ಕಾಶಂಪೂರ್ ಸೇರಿ ಹಲವರು ಭಾಗಿಯಾಗಿದ್ರು. ಈ ವೇಳೆ ಜೆಡಿಎಸ್ ನಾಯಕರು ಲೋಕಸಭೆ ಎಲೆಕ್ಷನ್‌ಗೆ ಸಿದ್ಧರಾಗಿ ಅಂತಾ ಕಾರ್ಯಕರ್ತರ ಹುರಿದುಂಬಿಸೋ ಜೊತೆಗೆ ವಿಜಯಪುರದಲ್ಲಿ ಯಾರಿಗೆ ಟಿಕೆಟ್(Ticket) ಕೊಟ್ರು ಕೆಲಸ ಮಾಡುವಂತೆ ಮನವಿ ಮಾಡಿದ್ರು. ಲೋಕಸಭೆ ಎಲೆಕ್ಷನ್‌ ಹತ್ತಿರ ಇರುವಾಗ್ಲೆ ಜೆಡಿಎಸ್ ಶಕ್ತಿಪ್ರದರ್ಶನ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಲ್ಲಿ ನಡುಕ ಹುಟ್ಟಿಸಿದೆ. ಅದರಲ್ಲೂ ಹಾಲಿ ಸಂಸದ ಜಿಗಜಿಣಗಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ರೆ..ಇತ್ತ ಮಾಜಿ ಇನ್ಸ್ಪೆಕ್ಟರ್‌ ಮಹೇಂದ್ರ ನಾಯಕ್‌, ವೈದ್ಯ ಬಾಬುರಾಜೇಂದ್ರ ನಾಯಕ್‌ ಸಹ ಬಿಜೆಪಿ ಟಿಕೆಟ್‌ ರೇಸ್ನಲ್ಲಿದ್ದಾರೆ. ಇದರ ಮಧ್ಯೆ ದೇವರಹಿಪ್ಪರಗಿ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ್ ನಾವೂ ಟಿಕೆಟ್ ಕೇಳ್ತೀವಿ ಎನ್ನುವ ಮೂಲಕ ಕದನ ಕಣ ಕಿಕ್ಕೇರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ಕಿಚ್ಚನ 'ಮ್ಯಾಕ್ಸ್' ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್: ಸಿನಿಮಾ ರಿಲೀಸ್‌ಗೆ ನಡೆದಿದೆ ದೊಡ್ಡ ಪ್ಲ್ಯಾನ್ !

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more