'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

Published : Jul 06, 2023, 07:31 PM ISTUpdated : Jul 06, 2023, 07:32 PM IST

ರಾಜ್ಯದಲ್ಲಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರನ್ನ ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ ಕುತ್ತಿಗೆ ಕುಯ್ದಿರಲ್ರೀ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರು (ಜು.06): ಸದನದಲ್ಲಿ ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದೀಯಾ ಎಂದು ಶೇಕ್‌ ಹ್ಯಾಂಡ್‌ ಬೇರೆ ಕೊಡ್ತಾರೆ. ನಾವು ರಾಜಕಾರಣವನ್ನು ನೋಡಿದ್ದೇವೆ. ಹುಸಿನಗೆ ಆಟಗಳು ನಮ್ಮ ಮುಂದೆ ನಡೆಯಲ್ಲ. ಜೀವನದಲ್ಲಿ ಎಂದಿಗೂ ನಿಮ್ಮ ಮುಲಾಜಿನಲ್ಲಿ ನಾನು ಬರಲಿಲ್ಲ. ನಿಮಗೆ ಕೇರ್‌ ಮಾಡೊಲ್ಲ.

ನಮ್ಮಲ್ಲಿ ಬೆಳೆದಂತವರನ್ನು ಕರೆದುಕೊಂಡು, ತಿಂದು - ಉಂಡು ಹೋದವರನ್ನ ಇಟ್ಕೊಂಡು ನಮಗೇ ಮಾತಾಡ್ತಿದೀರಾ. ನಿಮ್ಮನ್ನ ನಂಬಿದ ದೇವೇಗೌಡರ ಕುತ್ತಿಗೆ ಕುಯ್ದಿರಲ್ರೀ.. ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರ ಕುತ್ತಿಗೆ ಕುಯ್ದಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಶಕ್ತಿ ಯೋಜನೆ: ಬುರ್ಖಾ ಧರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ ಪುರುಷ

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀವು ನಮಗೆ ಕೇರ್‌ ಮಾಡಿಲ್ಲಾಂದ್ರೆ ನಾವು ನಿಮಗೆ ಕೇರ್‌ ಮಾಡೊಲ್ಲ. ಯಾರ್ರೀ ಹೆದರಿಕೊಳ್ತಾರೆ ನಿಮ್ಗೆ.. ಕೆಲಸಕ್ಕೆ ಬಾರದಿದ್ದನ್ನ ಮಾತಾಡ್ತೀರಲ್ರೀ. ನೀವು ಕೇರ್‌ ಮಾಡಿಲ್ಲಾಂದ್ರೆ.. ನಿಮ್ಮ ಅಪ್ಪರಂತೆ ಕೇರ್‌ ಮಾಡೋದಿಲ್ಲ ನಾವು.. ಇವರು ಕೇರ್‌ ಮಾಡದಿದ್ರೆ ಹೆದರಿಕೊಂಡು ಬಿಡ್ತೀವಾ ನಾವು.. ನಾನು ಮಾತಾಡ್ತೀನಿ ಎಂದು ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more