'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

'ಸೆಕ್ಯುಲರ್ ಅಂತಾ ಹೇಳಿ ದೇವೇಗೌಡರ ಕುತ್ತಿಗೆ ಕುಯ್ದವರು ನೀವು..' ಸಿದ್ಧುಗೆ ಎಚ್‌ಡಿಕೆ ವಾಗ್ಭಾಣ!

Published : Jul 06, 2023, 07:31 PM ISTUpdated : Jul 06, 2023, 07:32 PM IST

ರಾಜ್ಯದಲ್ಲಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರನ್ನ ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ ಕುತ್ತಿಗೆ ಕುಯ್ದಿರಲ್ರೀ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರು (ಜು.06): ಸದನದಲ್ಲಿ ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದೀಯಾ ಎಂದು ಶೇಕ್‌ ಹ್ಯಾಂಡ್‌ ಬೇರೆ ಕೊಡ್ತಾರೆ. ನಾವು ರಾಜಕಾರಣವನ್ನು ನೋಡಿದ್ದೇವೆ. ಹುಸಿನಗೆ ಆಟಗಳು ನಮ್ಮ ಮುಂದೆ ನಡೆಯಲ್ಲ. ಜೀವನದಲ್ಲಿ ಎಂದಿಗೂ ನಿಮ್ಮ ಮುಲಾಜಿನಲ್ಲಿ ನಾನು ಬರಲಿಲ್ಲ. ನಿಮಗೆ ಕೇರ್‌ ಮಾಡೊಲ್ಲ.

ನಮ್ಮಲ್ಲಿ ಬೆಳೆದಂತವರನ್ನು ಕರೆದುಕೊಂಡು, ತಿಂದು - ಉಂಡು ಹೋದವರನ್ನ ಇಟ್ಕೊಂಡು ನಮಗೇ ಮಾತಾಡ್ತಿದೀರಾ. ನಿಮ್ಮನ್ನ ನಂಬಿದ ದೇವೇಗೌಡರ ಕುತ್ತಿಗೆ ಕುಯ್ದಿರಲ್ರೀ.. ಸೆಕ್ಯೂಲರ್‌.. ಸೆಕ್ಯೂಲರ್‌ ಅಂತ ಹೇಳಿ 60 ವರ್ಷ ರಾಜಕೀಯ ಪಕ್ಷ ಕಟ್ಟಿ ಬೆಳೆಸಿದ ದೇವೇಗೌಡರ ಕುತ್ತಿಗೆ ಕುಯ್ದಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.

ಶಕ್ತಿ ಯೋಜನೆ: ಬುರ್ಖಾ ಧರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ ಪುರುಷ

ಇದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೀವು ನಮಗೆ ಕೇರ್‌ ಮಾಡಿಲ್ಲಾಂದ್ರೆ ನಾವು ನಿಮಗೆ ಕೇರ್‌ ಮಾಡೊಲ್ಲ. ಯಾರ್ರೀ ಹೆದರಿಕೊಳ್ತಾರೆ ನಿಮ್ಗೆ.. ಕೆಲಸಕ್ಕೆ ಬಾರದಿದ್ದನ್ನ ಮಾತಾಡ್ತೀರಲ್ರೀ. ನೀವು ಕೇರ್‌ ಮಾಡಿಲ್ಲಾಂದ್ರೆ.. ನಿಮ್ಮ ಅಪ್ಪರಂತೆ ಕೇರ್‌ ಮಾಡೋದಿಲ್ಲ ನಾವು.. ಇವರು ಕೇರ್‌ ಮಾಡದಿದ್ರೆ ಹೆದರಿಕೊಂಡು ಬಿಡ್ತೀವಾ ನಾವು.. ನಾನು ಮಾತಾಡ್ತೀನಿ ಎಂದು ತಿರುಗೇಟು ನೀಡಿದರು. ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more