CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

Published : Apr 12, 2024, 10:52 AM ISTUpdated : Apr 12, 2024, 10:53 AM IST

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ
ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ,ಅಪಪ್ರಚಾರ ಚರ್ಚೆಯಾಯಿತು
ಮೈತ್ರಿ ಗೆಳೆಯ ಜೆಡಿಎಸ್ ಬೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ 

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ತಮ್ಮ ಸೋಲನ್ನ ಸಿ.ಟಿ.ರವಿ(CT Ravi) ನೆನೆದಿದ್ದಾರೆ. ಮೈತ್ರಿ ಗೆಳೆಯ ಜೆಡಿಎಸ್ ಭೋಜೇಗೌಡರನ್ನು(MLC Bhojegowda) ಮಾತಿನಲ್ಲಿ ತಿವಿದಿದ್ದಾರೆ. ಪ್ರಚಾರದ ವೇಳೆ ವೇದಿಕೆ ಮೇಲಿದ್ದ ಜೆಡಿಎಸ್(JDS) ಎಂಎಲ್‌ಸಿ ಕಾಲೆಳೆದಿದ್ದಾರೆ. 4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದು 2018-2023. ಆದರೆ ಈ ಬಾರಿ ಹೆಚ್ಚು ಕೆಲಸ ಮಾಡಿದ್ರೂ ಸೋತೆ. ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ, ಅಪಪ್ರಚಾರ ಚರ್ಚೆಯಾಯಿತು ಎಂದು ಸಿ.ಟಿ.ರವಿ ಹೇಳಿದ್ದಾರೆ. ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು. ಜೆಡಿಎಸ್ ಅಭ್ಯರ್ಥಿ ಇದ್ರು ನನ್ನ ವಿರುದ್ಧ ಕೆಲಸ ಮಾಡಿದ್ರು. ನಮ್ಮ ನಾಯಕರ ಹೆಸರನ್ನೂ ಬಳಸಿ ಅಪಪ್ರಚಾರ ಮಾಡಿದ್ರು ಎಂದು ಸಿ.ಟಿ.ರವಿ ಹೇಳಿದ್ದಾರೆ. ಇದೆ ವೇಳೆ ಸಿಟ್ಟಾಗಿದ್ದ ಸಿ.ಟಿ‌.ರವಿ ಪರ ಬಿಎಸ್‌ವೈ(BSY) ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಸಿ.ಟಿ.ರವಿ ಭವಿಷ್ಯದ ಬಗ್ಗೆ ಮಾಜಿ ಸಿಎಂ ಮಾತನಾಡಿದ್ದಾರೆ. ಇವತ್ತು ನಮ್ಮ ಸಿ.ಟಿ.ರವಿಗೆ ಅನ್ಯಾಯವಾಗಿದೆ. ಯಾರು ವಿಧಾನಸಭೆಯಲ್ಲಿ ಗುಡುಗಬೇಕಿತ್ತೋ ಅವರು ಹೊರಗಿದ್ದಾರೆ.  ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಅವಕಾಶ ಸಿಗಲೇಬೇಕು ಎಂದು ಬಿಎಸ್‌ವೈ ಹೇಳದ್ದಾರೆ.

ಇದನ್ನೂ ವೀಕ್ಷಿಸಿ:  Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more