CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

CT Ravi on Bhojegowda : ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು: ಸಿ.ಟಿ. ರವಿ

Published : Apr 12, 2024, 10:52 AM ISTUpdated : Apr 12, 2024, 10:53 AM IST

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಸೋಲನ್ನ ನೆನೆದ ಸಿ.ಟಿ.ರವಿ
ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ,ಅಪಪ್ರಚಾರ ಚರ್ಚೆಯಾಯಿತು
ಮೈತ್ರಿ ಗೆಳೆಯ ಜೆಡಿಎಸ್ ಬೋಜೇಗೌಡರಿಗೆ ಮಾತಿನಲ್ಲಿ ತಿವಿದ ಸಿ.ಟಿ.ರವಿ 

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ತಮ್ಮ ಸೋಲನ್ನ ಸಿ.ಟಿ.ರವಿ(CT Ravi) ನೆನೆದಿದ್ದಾರೆ. ಮೈತ್ರಿ ಗೆಳೆಯ ಜೆಡಿಎಸ್ ಭೋಜೇಗೌಡರನ್ನು(MLC Bhojegowda) ಮಾತಿನಲ್ಲಿ ತಿವಿದಿದ್ದಾರೆ. ಪ್ರಚಾರದ ವೇಳೆ ವೇದಿಕೆ ಮೇಲಿದ್ದ ಜೆಡಿಎಸ್(JDS) ಎಂಎಲ್‌ಸಿ ಕಾಲೆಳೆದಿದ್ದಾರೆ. 4 ಬಾರಿ ಶಾಸಕನಾಗಿದ್ದಾಗ ಹೆಚ್ಚು ಕೆಲಸ ಮಾಡಿದ್ದು 2018-2023. ಆದರೆ ಈ ಬಾರಿ ಹೆಚ್ಚು ಕೆಲಸ ಮಾಡಿದ್ರೂ ಸೋತೆ. ಚುನಾವಣೆ ವೇಳೆ ಕೆಲಸ ಚರ್ಚೆಯಾಗಲಿಲ್ಲ, ಅಪಪ್ರಚಾರ ಚರ್ಚೆಯಾಯಿತು ಎಂದು ಸಿ.ಟಿ.ರವಿ ಹೇಳಿದ್ದಾರೆ. ನನ್ನ ಹಣೆಬರಹ ಕೆಟ್ಟಿತ್ತು, ಜೆಡಿಎಸ್ ಕೂಡ ನನ್ನ ವಿರೋಧವಾಗಿ ಕೆಲಸ ಮಾಡ್ತು. ಜೆಡಿಎಸ್ ಅಭ್ಯರ್ಥಿ ಇದ್ರು ನನ್ನ ವಿರುದ್ಧ ಕೆಲಸ ಮಾಡಿದ್ರು. ನಮ್ಮ ನಾಯಕರ ಹೆಸರನ್ನೂ ಬಳಸಿ ಅಪಪ್ರಚಾರ ಮಾಡಿದ್ರು ಎಂದು ಸಿ.ಟಿ.ರವಿ ಹೇಳಿದ್ದಾರೆ. ಇದೆ ವೇಳೆ ಸಿಟ್ಟಾಗಿದ್ದ ಸಿ.ಟಿ‌.ರವಿ ಪರ ಬಿಎಸ್‌ವೈ(BSY) ಭರ್ಜರಿ ಬ್ಯಾಟಿಂಗ್ ಮಾಡಿದ್ದು, ಸಿ.ಟಿ.ರವಿ ಭವಿಷ್ಯದ ಬಗ್ಗೆ ಮಾಜಿ ಸಿಎಂ ಮಾತನಾಡಿದ್ದಾರೆ. ಇವತ್ತು ನಮ್ಮ ಸಿ.ಟಿ.ರವಿಗೆ ಅನ್ಯಾಯವಾಗಿದೆ. ಯಾರು ವಿಧಾನಸಭೆಯಲ್ಲಿ ಗುಡುಗಬೇಕಿತ್ತೋ ಅವರು ಹೊರಗಿದ್ದಾರೆ.  ರವಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್‌ನಲ್ಲಿ ಅವಕಾಶ ಸಿಗಲೇಬೇಕು ಎಂದು ಬಿಎಸ್‌ವೈ ಹೇಳದ್ದಾರೆ.

ಇದನ್ನೂ ವೀಕ್ಷಿಸಿ:  Okkaliga Fight: ಹೊತ್ತಿ ಉರಿಯುತ್ತಿದೆ ಒಕ್ಕಲಿಗ ಕಿಚ್ಚು : ಡಿಕೆಶಿ ‘ಮೈತ್ರಿ ಪತನ’ ಏಟಿಗೆ ಎಚ್‌ಡಿಕೆ ‘ಕೊತ್ವಾಲ್’ ತಿರುಗೇಟು !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more