ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ ..!: ಫ್ರೀ ವಿದ್ಯುತ್‌ ಗೊಂದಲಕ್ಕೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ ..!

Jun 6, 2023, 3:43 PM IST

ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಾತನಾಡಿ, ಬಾಡಿಗೆದಾರರಿಗೂ 200 ಯುನಿಟ್‌ ವಿದ್ಯುತ್‌ ಉಚಿತ ಕೊಡುತ್ತೇವೆ. ಯಾರು 200 ಯುನಿಟ್‌ಯೊಳಗೆ ಉಪಯೋಗ ಮಾಡುತ್ತಾರೋ ಅವರ್ಯಾರು  ಕೂಡ ಬಿಲ್‌ ಕಟ್ಟಬೇಕಾಗಿಲ್ಲ ಎಂದು ಸಿಎಂ ಹೇಳಿದ್ದಾರೆ. ಕಾಂಗ್ರೆಸ್‌ ನ ಗೃಹಜ್ಯೋತಿ ಯೋಜನೆಯಡಿ 200 ಯುನಿಟ್‌ ವಿದ್ಯುತ್‌ ಉಚಿತ ಗ್ಯಾರಂಟಿ ಘೋಷಣೆಯಲ್ಲಿ ಹಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿತ್ತು. ಇದೀಗ ಅದಕ್ಕೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಯಾರು ಬಡವರು ಇದ್ದಾರೆ, ಅವರು 200 ಯೂನಿಟ್‌ ಒಳಗೆ ವಿದ್ಯುತ್‌ ಬಳಕೆ ಮಾಡಿದ್ರೆ, ಅವರು ಬಿಲ್‌ ಕಟ್ಟಬೇಕಿಲ್ಲ. ಈ ಯೋಜನೆ ಬಾಡಿಗೆದಾರರಿಗೂ ಅನ್ವಯ ಆಗುತ್ತೆ. ಇನ್ನೂ ಈ ಯೋಜನೆ ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಅನ್ವಯ ಆಗಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ: ಬಸ್‌ ಮಾರಾಟಕ್ಕಿದೆ ಎಂದು ಪೋಸ್ಟರ್ !