"ನೀತಿ"ರಾಮಯ್ಯನ ಮುಂದೆ “ಪಂಚ ಪ್ರತಿಜ್ಞೆ” ಚಾಲೆಂಜ್..!

"ನೀತಿ"ರಾಮಯ್ಯನ ಮುಂದೆ “ಪಂಚ ಪ್ರತಿಜ್ಞೆ” ಚಾಲೆಂಜ್..!

Published : May 31, 2023, 11:07 AM IST

ದಿನದಿಂದ ದಿನಕ್ಕೆ ಜೋರಾಗುತ್ತಿರುವ ಜ್ವಾಲೆಯ ಬಿಸಿ ಸರ್ಕಾರಕ್ಕೆ ಬಿಸಿತುಪ್ಪವಾದರೆ. ಮತ್ತೊಂದು ಕಡೆ ವಿರೋಧ ಪಕ್ಷಗಳಿಗೆ ಅದೇ ಆಹಾರ. ಗ್ಯಾರಂಟಿ ಪ್ರತಿಜ್ಞೆ ಈಡೇರಿಸಲು ಸಿಎಂ ಸಿದ್ದರಾಮಯ್ಯ ಇನ್ನಿಲ್ಲದ ಸರ್ಕಸ್ ನಡೆಸ್ತಿದ್ದಾರೆ. ಆಗಸ್ಟ್ 15ರಿಂದ ಉಚಿತ ಸ್ಕೀಮ್ ಜಾರಿಗೆ "ಸಿದ್ಧ" ಸೂತ್ರವೂ ರೆಡಿಯಾಗಿದೆ.
 

ರಾಜ್ಯವು ಅಗ್ನಿಕುಂಡದಲ್ಲಿ ಧಗಧಗಿಸುತ್ತಿರುವ ಗ್ಯಾರಂಟಿ ಜ್ವಾಲೆಯಂತಾಗಿದೆ. ಒಂದು ಕಡೆ ದಿನದಿಂದ ದಿನಕ್ಕೆ ಜೋರಾಗುತ್ತಿರುವ ಜ್ವಾಲೆಯ ಬಿಸಿ ಸರ್ಕಾರಕ್ಕೆ ಬಿಸಿತುಪ್ಪವಾದರೆ. ಮತ್ತೊಂದು ಕಡೆ ವಿರೋಧ ಪಕ್ಷಗಳಿಗೆ ಅದೇ ಆಹಾರ. ಗ್ಯಾರಂಟಿ ಯೋಜನೆ, ಉಚಿತ ಸ್ಕೀಮ್'ಗಳನ್ನು ಘೋಷಿಸಿದ್ದ ಕಾಂಗ್ರೆಸ್‌ಗೆ ಈಗ ಸರ್ಕಾರ ಬಂದ್ಮೇಲೆ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ. ಇನ್ನು ಈ ಉಚಿತ ಖಚಿತ ನಿಶ್ಚಿತ ಖಂಡಿತ ಇದೆಲ್ಲಾ ಜಾರಿಗೆ ಬರುವುದು ಯಾವಾಗ ಎನ್ನುವುದು ಈಗಿರುವ  ಪ್ರಶ್ನೆ. ಜೋಡೆತ್ತು ಸರ್ಕಾರದ ಅಂಗಳದಿಂದ ಹೊರ ಬಿದ್ದಿರೋ ಸುದ್ದಿಮೂಲಗಳ ಪ್ರಕಾರ ಸ್ವಾತಂತ್ರ್ಯೋತ್ಸವಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಫಿಕ್ಸ್ ಎನ್ನಲಾಗಿದೆ. ಚುನಾವಣೆಯ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಆಗಸ್ಟ್ 15ರಿಂದ ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರಂತೆ. ಜೂನ್ 1ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಿದ್ದರಾಮಯ್ಯನವರು ಘೋಷಣೆ ಮಾಡಲಿದ್ದಾರೆ ಎನ್ನಲಾಗ್ತಿದೆ. ಅಷ್ಟಕ್ಕೂ ಗ್ಯಾರಂಟಿ ಅನುಷ್ಠಾನಕ್ಕೆ ಸಿದ್ರಾಮಯ್ಯ ಸರ್ಕಾರ ಆಗಸ್ಟ್ 15ರ ಮುಹೂರ್ತ ಫಿಕ್ಸ್ ಮಾಡಿರೋದ್ಯಾಕೆ ಗೊತ್ತಾ..? ಈ ವಿಡಿಯೋ ನೋಡಿ 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more