ಕುತೂಹಲ ಕೆರಳಿಸಿದ ಕಾಮನ್ ಮ್ಯಾನ್ v/s ರಾಯಲ್ ಮ್ಯಾನ್! ಲೋಕಸಮರದಲ್ಲಿ ಯಾರು ಗೆಲ್ತಾರೆ? ಯಾರು ಸೋಲ್ತಾರೆ?

ಕುತೂಹಲ ಕೆರಳಿಸಿದ ಕಾಮನ್ ಮ್ಯಾನ್ v/s ರಾಯಲ್ ಮ್ಯಾನ್! ಲೋಕಸಮರದಲ್ಲಿ ಯಾರು ಗೆಲ್ತಾರೆ? ಯಾರು ಸೋಲ್ತಾರೆ?

Published : Apr 25, 2024, 10:12 AM IST

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೈವೋಲ್ಟೆಜ್ ಫೈಟ್..!
ಲೋಕಸಭಾ ಸಮರದ ಅಖಾಡದಲ್ಲಿ ಘಟಾನುಘಟಿ ಅಭ್ಯರ್ಥಿ..!
ರಾಜ್ಯ ರಾಜಧಾನಿಯಲ್ಲಿ 1 ಕೋಟಿಗೂ ಹೆಚ್ಚು ಮತದಾರರು..!
 

2024 ಲೋಕ ಸಮರಕ್ಕೆ ಅಖಾಡ ಸಿದ್ಧವಾಗಿದೆ. ಇಷ್ಟು ದಿನ ಬಹಿರಂಗವಾಗಿ ಅಬ್ಬರದ ಪ್ರಚಾರ ಮಾಡಿದ್ದಾಯ್ತು. ಅಲ್ಲಲ್ಲಿ ಭರ್ಜರಿಯಾಗಿ ಕ್ಯಾಂಪೇನ್ ಮಾಡಿದ್ದೂ ಆಯ್ತು. ಈಗ ಅದೆಲ್ಲದಕ್ಕೂ ಬ್ರೇಕ್, ಈಗೇನಿದ್ದರೂ ಏಪ್ರಿಲ್ 26ಕ್ಕೆ ವೋಟ್ ಮಾಡೋದಕ್ಕೆ ಕೌಂಟ್ ಡೌನ್ ಶುರು. ಇಷ್ಟು ದಿನ ಹೈವೋಲ್ಟೇಜ್ 2024ರ ಲೋಕ(Lok Sabha elections 2024) ಸಮರದ ತಯಾರಿ ಹೇಗ್ಹೇಗೆ ನಡೆದಿತ್ತು ಅನ್ನೊ ಪಿಕ್ಚರ್ ಎಲ್ಲರ ಮುಂದಿದೆ. ಲೋಕ ಸಮರದ ಭಾಗ ಒಂದರಲ್ಲಿ, ರಾಜ್ಯದಲ್ಲಿ ಮೊದಲ ಹಂತದದಲ್ಲಿ 14 ಕ್ಷೇತ್ರಗಳಲ್ಲಿ, ಇದೇ ಏಪ್ರಿಲ್ 26ರಂದು ಮತದಾನ(Voting) ನಡೆಯಲಿದೆ. ಈ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು ಹಾಸನ ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಈಗ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗಂತ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಯುವುದೇ ಇಲ್ಲ ಅರ್ಥ ಅಲ್ಲ. ಅಭ್ಯರ್ಥಿಗಳು ಈಗ ಸ್ವತಃ ತಾವೇ ತಮ್ಮ ಕ್ಷೇತ್ರದದಲ್ಲಿರವ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಾರೆ. ಇಲ್ಲಾ ಕಾರ್ಯಕರ್ತರು ಮನೆಗಳಿಗೆ ಹೋಗಿ ಮತದಾರರ(Voters)ಮನವೋಲಿಸುವ ಪ್ರಯತ್ನ ಮಾಡುತ್ತಾರೆ. ಪ್ರತಿಯೊಬ್ಬ ಅಭ್ಯರ್ಥಿಗೂ ಇದು ಪ್ರತಿಷ್ಠೆಯ ಕಣವಾಗಿರುವುದರಿಂದ, ಗೆಲ್ಲೊದಕ್ಕೆ ಏನೆಲ್ಲ ಕಸರತ್ತುಗಳನ್ನ ಮಾಡ್ಬೇಕಾಗಿದೆಯೋ ಅದೆಲ್ಲವನ್ನೂ ಮಾಡಲಾಗ್ತಿದೆ. 18ನೇ ಲೋಕ ಸಮರದಲ್ಲಿ ಕರ್ನಾಟಕದಿಂದ(Karnataka) ಸುಮಾರು 247 ಅಭ್ಯರ್ಥಿಗಳು ಮೊದಲ  ಚುನಾವಣಾ ಕಣದಲ್ಲಿದ್ದಾರೆ. ಅದರಲ್ಲಿ ಕೆಲ ಘಟಾನುಘಟಿ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರದಲ್ಲಿ ಅಭ್ಯರ್ಥಿಗಳಾಗಿದ್ದಾರೆ. ಇನ್ನೂ ಮೈಸೂರಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ.ಎಸ್. ಮಂಜುನಾತ್ ಸೇರಿ ಹಲವು ಪ್ರಮುಖರು ಮೊದಲ ಹಂತದ ಚುನಾವಣೆಯ ಅಭ್ಯರ್ಥಿಗಳಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಹಿಟ್ ಹಾಡುಗಳ ಸರದಾರ ಡಾ.ರಾಜ್‌ಕುಮಾರ್! ವರನಟನ ಬಗ್ಗೆ ತಿಳಿದುಕೊಳ್ಳಲೇಬೇಕಾದ ಸಂಗತಿಗಳಿವು!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more