Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Published : Dec 02, 2021, 02:40 PM ISTUpdated : Dec 02, 2021, 02:51 PM IST

*  ರಾಜಕೀಯ ಸಂಚಲನಕ್ಕೆ ಕಾರಣವಾದ ಆ ಒಂದು ವಿಡಿಯೋ
*  ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿದ ಕಾಂಗ್ರೆಸ್‌ ಮುಖಂಡ
*  ಗೋಪಾಲಕೃಷ್ಣ ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ 
 

ಬೆಂಗಳೂರು(ಡಿ.02): ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬ್ರೇಕ್‌ ಮಾಡಿದ ಸುದ್ದಿಯೊಂದು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಒಬ್ಬ ಎಂಎಲ್‌ಎ ಜೀವ ತೆಗೆಯೋದಕ್ಕೆ ಸುಪಾರಿ ಕೊಡೋ ಮಾತುಕತೆ ರಾಜ್ಯಾದ್ಯಂತ ಸದ್ದು ಮಾಡಿದೆ. ಒಂದೇ ಒಂದು ವಿಡಿಯೋ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಮುಖಂಡನೊಬ್ಬ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿರುವ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ ಮುಚ್ಚಿಟ್ಟುಕೊಳ್ಳೋಕೆ ಯಾವ ಅಂಶಗಳೂ ಇಲ್ಲ.   

ಎರಡು ಪಕ್ಷಗಳ ರಾಜಕೀಯ ತಿಕ್ಕಾಟ, ದ್ವೇಷ, ಯಾವ ಹಂತಕ್ಕೆ ಹೋಗಬಹುದು ಅನ್ನೋದನ್ನ ಅದೊಂದು ವಿಡಿಯೋ ಹೇಳ್ತಾಇದೆ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ ಆಗಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಅವರನ್ನ ಹೇಗಾದರೂ ಮಾಡಿ ಮುಗಿಸಬೇಕು ಎಷ್ಟು ಹಣ ಬೇಕಾದರೂ ಹೋಗಲಿ ಅಂತ ಮಾತನಾಡಿದ್ದಾರೆ. 

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

ಕಳೆದ ಬಾರಿಯ ಚುನಾವಣೆಯಲ್ಲಿ ಎಸ್‌.ಆರ್‌. ವಿಶ್ವನಾಥ್‌ ಎದುರು ಗೋಪಾಲಕೃಷ್ಣ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಇರಾದೆಯನ್ನೂ ಕೂಡ ಹೊಂದಿದ್ದಾರೆ ಗೋಪಾಲಕೃಷ್ಣ. ಆದರೆ, ವಿಶ್ವನಾಥ್‌ ಮುಂದೆ ಗೆಲ್ಲೋದು ಸಾಧ್ಯವೇ ಇಲ್ಲ ಅಂತ ಅನಿಸಿರಬೇಕು. ಹೀಗಾಗಿ ವಿಶ್ವನಾಥ್‌ ಅವರನ್ನ ಕೊಂದು ಹಾಕಬೇಕು ಅನ್ನೋ ವಿಚಾರಕ್ಕೆ ಬಂದಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more