Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Suvarna News   | Asianet News
Published : Dec 02, 2021, 02:40 PM ISTUpdated : Dec 02, 2021, 02:51 PM IST

*  ರಾಜಕೀಯ ಸಂಚಲನಕ್ಕೆ ಕಾರಣವಾದ ಆ ಒಂದು ವಿಡಿಯೋ
*  ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿದ ಕಾಂಗ್ರೆಸ್‌ ಮುಖಂಡ
*  ಗೋಪಾಲಕೃಷ್ಣ ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ 
 

ಬೆಂಗಳೂರು(ಡಿ.02): ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬ್ರೇಕ್‌ ಮಾಡಿದ ಸುದ್ದಿಯೊಂದು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಒಬ್ಬ ಎಂಎಲ್‌ಎ ಜೀವ ತೆಗೆಯೋದಕ್ಕೆ ಸುಪಾರಿ ಕೊಡೋ ಮಾತುಕತೆ ರಾಜ್ಯಾದ್ಯಂತ ಸದ್ದು ಮಾಡಿದೆ. ಒಂದೇ ಒಂದು ವಿಡಿಯೋ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಮುಖಂಡನೊಬ್ಬ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿರುವ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ ಮುಚ್ಚಿಟ್ಟುಕೊಳ್ಳೋಕೆ ಯಾವ ಅಂಶಗಳೂ ಇಲ್ಲ.   

ಎರಡು ಪಕ್ಷಗಳ ರಾಜಕೀಯ ತಿಕ್ಕಾಟ, ದ್ವೇಷ, ಯಾವ ಹಂತಕ್ಕೆ ಹೋಗಬಹುದು ಅನ್ನೋದನ್ನ ಅದೊಂದು ವಿಡಿಯೋ ಹೇಳ್ತಾಇದೆ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ ಆಗಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಅವರನ್ನ ಹೇಗಾದರೂ ಮಾಡಿ ಮುಗಿಸಬೇಕು ಎಷ್ಟು ಹಣ ಬೇಕಾದರೂ ಹೋಗಲಿ ಅಂತ ಮಾತನಾಡಿದ್ದಾರೆ. 

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

ಕಳೆದ ಬಾರಿಯ ಚುನಾವಣೆಯಲ್ಲಿ ಎಸ್‌.ಆರ್‌. ವಿಶ್ವನಾಥ್‌ ಎದುರು ಗೋಪಾಲಕೃಷ್ಣ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಇರಾದೆಯನ್ನೂ ಕೂಡ ಹೊಂದಿದ್ದಾರೆ ಗೋಪಾಲಕೃಷ್ಣ. ಆದರೆ, ವಿಶ್ವನಾಥ್‌ ಮುಂದೆ ಗೆಲ್ಲೋದು ಸಾಧ್ಯವೇ ಇಲ್ಲ ಅಂತ ಅನಿಸಿರಬೇಕು. ಹೀಗಾಗಿ ವಿಶ್ವನಾಥ್‌ ಅವರನ್ನ ಕೊಂದು ಹಾಕಬೇಕು ಅನ್ನೋ ವಿಚಾರಕ್ಕೆ ಬಂದಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more