Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Murder Sketch: ಸೋಲಿನ ಹತಾಶೆಯೇ BJP MLA ಕೊಲೆ ಸ್ಕೆಚ್‌ಗೆ ಕಾರಣವಾಯ್ತಾ?

Suvarna News   | Asianet News
Published : Dec 02, 2021, 02:40 PM ISTUpdated : Dec 02, 2021, 02:51 PM IST

*  ರಾಜಕೀಯ ಸಂಚಲನಕ್ಕೆ ಕಾರಣವಾದ ಆ ಒಂದು ವಿಡಿಯೋ
*  ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿದ ಕಾಂಗ್ರೆಸ್‌ ಮುಖಂಡ
*  ಗೋಪಾಲಕೃಷ್ಣ ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ 
 

ಬೆಂಗಳೂರು(ಡಿ.02): ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಬ್ರೇಕ್‌ ಮಾಡಿದ ಸುದ್ದಿಯೊಂದು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ. ಒಬ್ಬ ಎಂಎಲ್‌ಎ ಜೀವ ತೆಗೆಯೋದಕ್ಕೆ ಸುಪಾರಿ ಕೊಡೋ ಮಾತುಕತೆ ರಾಜ್ಯಾದ್ಯಂತ ಸದ್ದು ಮಾಡಿದೆ. ಒಂದೇ ಒಂದು ವಿಡಿಯೋ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ ಮುಖಂಡನೊಬ್ಬ ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್‌ ಹಾಕಿರುವ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ ಮುಚ್ಚಿಟ್ಟುಕೊಳ್ಳೋಕೆ ಯಾವ ಅಂಶಗಳೂ ಇಲ್ಲ.   

ಎರಡು ಪಕ್ಷಗಳ ರಾಜಕೀಯ ತಿಕ್ಕಾಟ, ದ್ವೇಷ, ಯಾವ ಹಂತಕ್ಕೆ ಹೋಗಬಹುದು ಅನ್ನೋದನ್ನ ಅದೊಂದು ವಿಡಿಯೋ ಹೇಳ್ತಾಇದೆ. ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ಅವರು ಮಾತನಾಡಿರುವ ವಿಡಿಯೋ ಇಡೀ ಪ್ರಕರಣದ ಹೈಲೈಟ್‌ ಆಗಿದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಅವರನ್ನ ಹೇಗಾದರೂ ಮಾಡಿ ಮುಗಿಸಬೇಕು ಎಷ್ಟು ಹಣ ಬೇಕಾದರೂ ಹೋಗಲಿ ಅಂತ ಮಾತನಾಡಿದ್ದಾರೆ. 

SR Vishwanath Murder Conspiracy: ದೂರು ಕೊಡುವಲ್ಲಿಯೇ ಎಡವಿದರಾ ಶಾಸಕ..?

ಕಳೆದ ಬಾರಿಯ ಚುನಾವಣೆಯಲ್ಲಿ ಎಸ್‌.ಆರ್‌. ವಿಶ್ವನಾಥ್‌ ಎದುರು ಗೋಪಾಲಕೃಷ್ಣ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಇರಾದೆಯನ್ನೂ ಕೂಡ ಹೊಂದಿದ್ದಾರೆ ಗೋಪಾಲಕೃಷ್ಣ. ಆದರೆ, ವಿಶ್ವನಾಥ್‌ ಮುಂದೆ ಗೆಲ್ಲೋದು ಸಾಧ್ಯವೇ ಇಲ್ಲ ಅಂತ ಅನಿಸಿರಬೇಕು. ಹೀಗಾಗಿ ವಿಶ್ವನಾಥ್‌ ಅವರನ್ನ ಕೊಂದು ಹಾಕಬೇಕು ಅನ್ನೋ ವಿಚಾರಕ್ಕೆ ಬಂದಿದ್ದಾರೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more