ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more