ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more