ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

ನಿಗಮ ಮಂಡಳಿ ನೇಮಕಕ್ಕೆ ಷರತ್ತು: 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚನೆ

Published : Oct 30, 2023, 12:43 PM IST

ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ತಿಳಿಸಿರುವ ಹೈಕಮಾಂಡ್ 
ಹೈಕಮಾಂಡ್ ಕಂಡಿಶನ್ನಿಂದ ಆಗಿರುವ ನಿಗಮ ಮಂಡಳಿ ಆಕಾಂಕ್ಷಿಗಳು
ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ 

ನಿಗಮ ಮಂಡಳಿ ನೇಮಕಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಕೆಲವು ಷರತ್ತುಗಳನ್ನು ಹಾಕಿದೆ ಎಂದು ತಿಳಿದುಬಂದಿದೆ. ಹಾಗಾಗಿ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ಸಿಎಂ, ಡಿಸಿಎಂ ಚಾಲನೆ ನೀಡಿದ್ದಾರೆ. ಸಭೆ ಮೇಲೆ ಸಭೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ(Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್(DK shivakumar). ರಹಸ್ಯವಾಗಿ ಇಬ್ಬರೇ ಕುಳಿತು ಪಟ್ಟಿಗೆ ಫೈನಲ್‌ ಟಚ್ ನೀಡುತ್ತಿದ್ದಾರೆ. ಕಂಡೀಷನ್ ಬಗ್ಗೆ ಸಿಎಂ ಹಾಗೂ ಡಿಸಿಎಂಗೆ ಹೈಕಮಾಂಡ್ ತಿಳಿಸಿದೆ. ಹೈಕಮಾಂಡ್ ಕಂಡಿಷನ್‌ನಿಂದ ನಿಗಮ ಮಂಡಳಿ ಆಕಾಂಕ್ಷಿಗಳು(Appointment Boards & Corporations) ಕೊಂಚ ಖುಷಿಯಾಗಿದ್ದು, ಒಟ್ಟು 50 ರಿಂದ 60 ಮಂದಿ ನಿಗಮ ಮಂಡಳಿಗೆ ನೇಮಿಸುವ ಸಾಧ್ಯತೆ ಇದೆ. 50-50 ಸೂತ್ರ ಅನುಸರಿಸಲು ಹೈಕಮಾಂಡ್ ಸೂಚಿಸಿದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಸಮಾನ ಅವಕಾಶ ನೀಡಲಾಗುವುದು. ಇಬ್ಬರಿಗೂ 50% ಸಮನಾಗಿ ಅವಕಾಶ ಇರುವಂತೆ ಪಟ್ಟಿ ಮಾಡಲು ಸೂಚನೆ ನೀಡಲಾಗಿದೆ. ಈಗ ನಿಗಮ ಮಂಡಳಿಗೆ ನೇಮಕ ಆಗುವ ಶಾಸಕರು ಮುಂದೆ ಸಚಿವ ಸ್ಥಾನ ಕೇಳುವಂತಿಲ್ಲ. ಅಂತವರನ್ನ ಮುಂದೆ ಸಚಿವ ಸಂಪುಟ ಪುನಾರಚನೆ ಆದಾಗ ಪರಿಗಣಿಸುವುದಿಲ್ಲ. ನಿಗಮ ಮಂಡಳಿಗೆ ಆಯ್ಕೆ ಆಗುವ ಕಾರ್ಯಕರ್ತರನ್ನ MLCಗೆ ಪರಿಗಣನೆ ಇಲ್ಲ. ಮುಂದೆ ಕನಿಷ್ಟ 15 ರಿಂದ 20 ಪರಿಷತ್‌ ಸ್ಥಾನಗಳು ಖಾಲಿ ಆಗಲಿವೆ. ಈಗ ನಿಗಮ ಮಂಡಳಿಗೆ ನೇಮಕವಾಗುವವರಿಗೆ MLC ಆಗುವ ಅವಕಾಶ ಇರುವುದಿಲ್ಲ. 

ಇದನ್ನೂ ವೀಕ್ಷಿಸಿ:  ಇಸ್ರೇಲ್-ಹಮಾಸ್ ಕದನ : ಯುದ್ಧ 2ನೇ ಹಂತ ತಲುಪಿದೆ ಎಂದ ಇಸ್ರೇಲ್ ಪ್ರಧಾನಿ ನೆತನ್ಯಾಹು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more