ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

Published : Sep 10, 2023, 11:14 AM IST

ಕಾಂಗ್ರೆಸ್ ಕೂಡ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅದೆಲ್ಲವನ್ನು ಮನಸಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಿ. ನರೇಂದ್ರ ಮೋದಿ ಪ್ರಧಾನಿ ಆಗಬೇಕಾ? ಬಿಜೆಪಿಯವರು ಸ್ವಾರ್ಥ ಬಿಡಿ. ಕೇಂದ್ರದ ಜೊತೆ ಮಾತಾಡಿ ತೀರ್ಮಾನ ಮಾಡಿ ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.
 

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್(JDS) ಸೀಟು ಹಂಚಿಕೆ ವಿಚಾರವಾಗಿ ಕೇಸರಿ ನಾಯಕರುಗಳೇ ಎಡವಬೇಡಿ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ, 6 ಕ್ಷೇತ್ರಗಳಲ್ಲಿ ಗೆಲ್ಲಬಹುದು. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ. ಮೈತ್ರಿ ಅನಿವಾರ್ಯ ಬಂದರೆ ಇಬ್ಬರೂ ಗೆಲ್ಲವುಂತೆ ನೋಡಿಕೊಳ್ಳಬೇಕು ಎಂದು ಜಿ.ಟಿ.ದೇವೇಗೌಡ(GT Devegowda) ಹೇಳಿದ್ದಾರೆ. ಸರ್ವೆ ಮಾಡಿ ಗೆಲ್ಲುವ ಆಧಾರದಲ್ಲಿ ಸೀಟು ಹಂಚಿಕೆ ಆಗಬೇಕು. ದೇವೇಗೌಡರು, ಕುಮಾರಸ್ವಾಮಿ ಹಾದಿಯಾಗಿ ನಮ್ಮೆಲ್ಲರ ಉದ್ದೇಶ ಈ ಚುನಾವಣೆಯಲ್ಲಿ ಕಾಂಗ್ರೆಸ್(Congress) ಸೋಲಿಸಬೇಕು ಎಂಬುದಾಗಿದೆ. ಸೋಲಿಸಬೇಕಾದ್ರೆ ನಾವು ಬಿಜೆಪಿ(BJP) ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಆದರೆ ಇನ್ನೂ ಸೀಟು ಹಂಚಿಕೆ ಆಗಿಲ್ಲ. ವರಿಷ್ಠರು ನಾಲ್ಕು ವಿಭಾಗದಲ್ಲಿ ಸಭೆ ಮಾಡಲು ಹೇಳಿದ್ದಾರೆ. ನಂತರ ಜಿಲ್ಲಾ ಮಟ್ಟದ ಸರ್ವೆ ಆಗಬೇಕು. ಅಲ್ಲಿ ನಮ್ಮ ಪಕ್ಷದ ಎಷ್ಟು ಜನ ಗೆಲ್ಲುತ್ತಾರೆ ತಿಳಿಸಬೇಕು. ನಂತರ ನಾನು ಮಾತಡುತ್ತೇನೆ ಅಂತ ಹೆಚ್‌.ಡಿ.ದೇವೇಗೌಡರು ಹೇಳಿದ್ದಾರೆ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ 6 ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ ಎಂದು ಜಿಟಿಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕಾರು, ಲಾರಿ, ಬಸ್‌ ಮಧ್ಯೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more