ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

ಸರ್ವೆ ಮಾಡಿ ಯಾವ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲುತ್ತೆ ಅಲ್ಲಿ ಸೀಟು ಕೊಡಿ: ಜಿ.ಟಿ.ದೇವೇಗೌಡ

Published : Sep 10, 2023, 11:14 AM IST

ಕಾಂಗ್ರೆಸ್ ಕೂಡ ಇತರ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ. ಅದೆಲ್ಲವನ್ನು ಮನಸಲ್ಲಿ ಇಟ್ಟುಕೊಂಡು ತೀರ್ಮಾನ ಮಾಡಿ. ನರೇಂದ್ರ ಮೋದಿ ಪ್ರಧಾನಿ ಆಗಬೇಕಾ? ಬಿಜೆಪಿಯವರು ಸ್ವಾರ್ಥ ಬಿಡಿ. ಕೇಂದ್ರದ ಜೊತೆ ಮಾತಾಡಿ ತೀರ್ಮಾನ ಮಾಡಿ ಎಂದು ಜಿ.ಟಿ.ದೇವೇಗೌಡ ಹೇಳಿದ್ದಾರೆ.
 

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್(JDS) ಸೀಟು ಹಂಚಿಕೆ ವಿಚಾರವಾಗಿ ಕೇಸರಿ ನಾಯಕರುಗಳೇ ಎಡವಬೇಡಿ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ, 6 ಕ್ಷೇತ್ರಗಳಲ್ಲಿ ಗೆಲ್ಲಬಹುದು. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ. ಮೈತ್ರಿ ಅನಿವಾರ್ಯ ಬಂದರೆ ಇಬ್ಬರೂ ಗೆಲ್ಲವುಂತೆ ನೋಡಿಕೊಳ್ಳಬೇಕು ಎಂದು ಜಿ.ಟಿ.ದೇವೇಗೌಡ(GT Devegowda) ಹೇಳಿದ್ದಾರೆ. ಸರ್ವೆ ಮಾಡಿ ಗೆಲ್ಲುವ ಆಧಾರದಲ್ಲಿ ಸೀಟು ಹಂಚಿಕೆ ಆಗಬೇಕು. ದೇವೇಗೌಡರು, ಕುಮಾರಸ್ವಾಮಿ ಹಾದಿಯಾಗಿ ನಮ್ಮೆಲ್ಲರ ಉದ್ದೇಶ ಈ ಚುನಾವಣೆಯಲ್ಲಿ ಕಾಂಗ್ರೆಸ್(Congress) ಸೋಲಿಸಬೇಕು ಎಂಬುದಾಗಿದೆ. ಸೋಲಿಸಬೇಕಾದ್ರೆ ನಾವು ಬಿಜೆಪಿ(BJP) ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು. ಆದರೆ ಇನ್ನೂ ಸೀಟು ಹಂಚಿಕೆ ಆಗಿಲ್ಲ. ವರಿಷ್ಠರು ನಾಲ್ಕು ವಿಭಾಗದಲ್ಲಿ ಸಭೆ ಮಾಡಲು ಹೇಳಿದ್ದಾರೆ. ನಂತರ ಜಿಲ್ಲಾ ಮಟ್ಟದ ಸರ್ವೆ ಆಗಬೇಕು. ಅಲ್ಲಿ ನಮ್ಮ ಪಕ್ಷದ ಎಷ್ಟು ಜನ ಗೆಲ್ಲುತ್ತಾರೆ ತಿಳಿಸಬೇಕು. ನಂತರ ನಾನು ಮಾತಡುತ್ತೇನೆ ಅಂತ ಹೆಚ್‌.ಡಿ.ದೇವೇಗೌಡರು ಹೇಳಿದ್ದಾರೆ. ನಾವು ಸ್ವಂತ ಶಕ್ತಿಯಿಂದ ಸ್ವರ್ಧೆ ಮಾಡಿದ್ರೆ 6 ಕ್ಷೇತ್ರಗಳಲ್ಲಿ ಶಕ್ತಿ ಪ್ರದರ್ಶನ ಮಾಡುತ್ತೇವೆ. 5 ಸಾವಿರ ವೋಟ್ ತಗೊಂಡ್ರು ಸರಿ, 28 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತೇವೆ ಎಂದು ಜಿಟಿಡಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕಾರು, ಲಾರಿ, ಬಸ್‌ ಮಧ್ಯೆ ಸರಣಿ ಅಪಘಾತ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more