ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

Published : Dec 09, 2022, 08:57 PM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ವಿಜಯ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸಾಧಿಸಿದ ವಿಜಯ, ರಾಜಕೀಯ ಪಕ್ಷಗಳಿಗೆ ಮಾತ್ರವಲ್ಲ, ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಲ್ಲೂ ತಲ್ಲಣ ಸೃಷ್ಟಿಸಿದೆ. ಮೋದಿ ಹಾಗೂ ಯೋಗಿ ನಾಡಲ್ಲಿ ಕೈಹಿಡಿದ ಟಿಕೆಟ್‌ ಸೂತ್ರ ರಾಜ್ಯದಲ್ಲೂ ಜಾರಿಯಾಗಬಹುದಾ ಎನ್ನುವ ಅಚ್ಚರಿಯಲ್ಲಿ ನಾಯಕರಿದ್ದಾರೆ.

ಬೆಂಗಳೂರು (ಡಿ.9): ಗುಜರಾತಲ್ಲಿ ಮೋದಿ ಸುನಾಮಿಗೆ ಕರ್ನಾಟಕದ ಕೇಸರಿ ಕೋಟೆಯಲ್ಲಿ ಮಹಾ ತಲ್ಲಣಗೊಂಡಿದೆ. ಇನ್ನೊಂದೆಡೆ ಹಿಮಾಚಲದಲ್ಲಿ ಕಾಂಗ್ರೆಸ್ ಕಮಾಲ್  ಮಾಡಿದ್ದು, ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ.  ಉತ್ತರ, ಪಶ್ಚಿಮದಲ್ಲಿ ಬೀಸಿದ ಸುನಾಮಿಗೆ ಕರ್ನಾಟಕದ ಕೈ-ಕೇಸರಿ ಕಲಿಗಳು ಬೆಚ್ಚಿ ಬಿದ್ದಿದ್ದಾರೆ. ಬಿಜೆಪಿ, ಕಾಂಗ್ರೆಸ್‌ಗೆ ಗುಜರಾತ್, ಹಿಮಾಚಲದ ಫಲಿತಾಂಶ ಕಲಿಸಿದ ಪಾಠಗಳು ಹಾಗಿವೆ. ಯೋಗಿಗಳ ನಾಡು ಮೋದಿ ನಾಡಲ್ಲಿ ಕೈ ಹಿಡಿದ ಬಿಜೆಪಿ ಟಿಕೆಟ್ ಸೂತ್ರ, ಕರ್ನಾಟಕದಲ್ಲೂ ಜಾರಿಯಾಗುತ್ತಾ ಅನ್ನೋ ಕುತೂಹಲ ಎಲ್ಲರಲ್ಲಿದೆ.

ಗುಜರಾತ್'ನಲ್ಲಿ ಎದ್ದ ಮೋದಿ ಅಲೆಯಿಂದ ಕರ್ನಾಟಕವನ್ನು ಗೆಲ್ಲುತ್ತೇವೆ ಅಂತ ಹೊರಟಿರೋ ಕೇಸರಿ ಕಲಿಗಳಿಗೆ ಹಿಮಾಚಲ ಪ್ರದೇಶ ಫಲಿತಾಂಶ ಕಲಿಸಿದ ಪಾಠ ಎಂಥದ್ದು ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು.  ಗುಜರಾತ್'ನಲ್ಲಿ 38 ಮಂದಿ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಇದೇ ವಿಚಾರ ಈಗ ರಾಜ್ಯ ತಾಯಕರ ತಲೆಬಿಸಿಕೆ ಕಾರಣವಾಗಿದೆ.

ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

ಅಲ್ಲಿಯ ವಿಕ್ಟರಿ, ಇಲ್ಲಿ ಗಾಬರಿ ಮೂಡಿಸಿದೆ. ಗುಜರಾತ್'ನಲ್ಲಿ ಬಿಜೆಪಿ ಗೆದ್ದದ್ದಕ್ಕೆ ಇಲ್ಲಿ ಸಂಭ್ರಮಿಸ್ತಾ ಇರೋ ಕೇಸರಿ ಕಲಿಗಳಿಗೆ ಇಲ್ಲೂ ಗುಜರಾತ್ ಸೂತ್ರ ಜಾರಿಯಾಗುವ ಆತಂಕ ಒಳಗೊಳಗೇ ಕಾಡುತ್ತಿದೆ.  ಗುಜರಾತ್'ನಲ್ಲಿ ಬಿಜೆಪಿ ಸಾಧಿಸಿದ ಪ್ರಚಂಡ ಗೆಲುವು ಕರ್ನಾಟಕದಲ್ಲಿ ಕಾಂಗ್ರೆಸ್'ಗೆ ಪಾಠವಾದ್ರೆ, ಕೆಲ ಬಿಜೆಪಿ ಶಾಸಕರಿಗೆ ಎಚ್ಚರಿಕೆಯ ಗಂಟೆಯಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more