ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

Published : Dec 09, 2022, 08:57 PM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ವಿಜಯ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಸಾಧಿಸಿದ ವಿಜಯ, ರಾಜಕೀಯ ಪಕ್ಷಗಳಿಗೆ ಮಾತ್ರವಲ್ಲ, ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಲ್ಲೂ ತಲ್ಲಣ ಸೃಷ್ಟಿಸಿದೆ. ಮೋದಿ ಹಾಗೂ ಯೋಗಿ ನಾಡಲ್ಲಿ ಕೈಹಿಡಿದ ಟಿಕೆಟ್‌ ಸೂತ್ರ ರಾಜ್ಯದಲ್ಲೂ ಜಾರಿಯಾಗಬಹುದಾ ಎನ್ನುವ ಅಚ್ಚರಿಯಲ್ಲಿ ನಾಯಕರಿದ್ದಾರೆ.

ಬೆಂಗಳೂರು (ಡಿ.9): ಗುಜರಾತಲ್ಲಿ ಮೋದಿ ಸುನಾಮಿಗೆ ಕರ್ನಾಟಕದ ಕೇಸರಿ ಕೋಟೆಯಲ್ಲಿ ಮಹಾ ತಲ್ಲಣಗೊಂಡಿದೆ. ಇನ್ನೊಂದೆಡೆ ಹಿಮಾಚಲದಲ್ಲಿ ಕಾಂಗ್ರೆಸ್ ಕಮಾಲ್  ಮಾಡಿದ್ದು, ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಸೃಷ್ಟಿಸಿದೆ.  ಉತ್ತರ, ಪಶ್ಚಿಮದಲ್ಲಿ ಬೀಸಿದ ಸುನಾಮಿಗೆ ಕರ್ನಾಟಕದ ಕೈ-ಕೇಸರಿ ಕಲಿಗಳು ಬೆಚ್ಚಿ ಬಿದ್ದಿದ್ದಾರೆ. ಬಿಜೆಪಿ, ಕಾಂಗ್ರೆಸ್‌ಗೆ ಗುಜರಾತ್, ಹಿಮಾಚಲದ ಫಲಿತಾಂಶ ಕಲಿಸಿದ ಪಾಠಗಳು ಹಾಗಿವೆ. ಯೋಗಿಗಳ ನಾಡು ಮೋದಿ ನಾಡಲ್ಲಿ ಕೈ ಹಿಡಿದ ಬಿಜೆಪಿ ಟಿಕೆಟ್ ಸೂತ್ರ, ಕರ್ನಾಟಕದಲ್ಲೂ ಜಾರಿಯಾಗುತ್ತಾ ಅನ್ನೋ ಕುತೂಹಲ ಎಲ್ಲರಲ್ಲಿದೆ.

ಗುಜರಾತ್'ನಲ್ಲಿ ಎದ್ದ ಮೋದಿ ಅಲೆಯಿಂದ ಕರ್ನಾಟಕವನ್ನು ಗೆಲ್ಲುತ್ತೇವೆ ಅಂತ ಹೊರಟಿರೋ ಕೇಸರಿ ಕಲಿಗಳಿಗೆ ಹಿಮಾಚಲ ಪ್ರದೇಶ ಫಲಿತಾಂಶ ಕಲಿಸಿದ ಪಾಠ ಎಂಥದ್ದು ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು.  ಗುಜರಾತ್'ನಲ್ಲಿ 38 ಮಂದಿ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಇದೇ ವಿಚಾರ ಈಗ ರಾಜ್ಯ ತಾಯಕರ ತಲೆಬಿಸಿಕೆ ಕಾರಣವಾಗಿದೆ.

ಬಿಜೆಪಿಯ 'ಡಬಲ್ ಎಂಜಿನ್' ಮಂತ್ರ: ಇದು ಗುಜರಾತ್ ಗೆಲುವಿನ ರಹಸ್ಯ

ಅಲ್ಲಿಯ ವಿಕ್ಟರಿ, ಇಲ್ಲಿ ಗಾಬರಿ ಮೂಡಿಸಿದೆ. ಗುಜರಾತ್'ನಲ್ಲಿ ಬಿಜೆಪಿ ಗೆದ್ದದ್ದಕ್ಕೆ ಇಲ್ಲಿ ಸಂಭ್ರಮಿಸ್ತಾ ಇರೋ ಕೇಸರಿ ಕಲಿಗಳಿಗೆ ಇಲ್ಲೂ ಗುಜರಾತ್ ಸೂತ್ರ ಜಾರಿಯಾಗುವ ಆತಂಕ ಒಳಗೊಳಗೇ ಕಾಡುತ್ತಿದೆ.  ಗುಜರಾತ್'ನಲ್ಲಿ ಬಿಜೆಪಿ ಸಾಧಿಸಿದ ಪ್ರಚಂಡ ಗೆಲುವು ಕರ್ನಾಟಕದಲ್ಲಿ ಕಾಂಗ್ರೆಸ್'ಗೆ ಪಾಠವಾದ್ರೆ, ಕೆಲ ಬಿಜೆಪಿ ಶಾಸಕರಿಗೆ ಎಚ್ಚರಿಕೆಯ ಗಂಟೆಯಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more