ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

ರಾಜ್ಯ ಬಿಜೆಪಿ-ಕಾಂಗ್ರೆಸ್‌ನಲ್ಲಿ ಗುಜರಾತ್‌ ಮಾಡೆಲ್‌ ಜಪ!

Published : Dec 10, 2022, 12:04 AM IST

ಗುಜರಾತ್‌ನಲ್ಲಿ ಬಿಜೆಪಿ ಸಾಧಿಸಿರುವ ಐತಿಹಾಸಿಕ ಗೆಲುವು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗೆ ಕಾರಣವಾಗಲಿದೆ. ಬಿಜೆಪಿ ಪಕ್ಷ ಮಾತ್ರವಲ್ಲ, ಈಗ ಕಾಂಗ್ರೆಸ್‌ ಪಕ್ಷ ಕೂಡ ಗುಜರಾತ್‌ ಮಾಡೆಲ್ ಬಗ್ಗೆ ಕುತೂಹಲದ ಕಣ್ಣಲ್ಲಿ ನೋಡುತ್ತಿದೆ. 

ಬೆಂಗಳೂರು (ಡಿ.9): ರಾಜ್ಯ ರಾಜಕೀಯದಲ್ಲಿ ಈವರೆಗೂ ಅಭಿವೃದ್ಧಿ ವಿಚಾರದಲ್ಲಿ ಮಾತ್ರವೇ ಗುಜರಾತ್‌ ಮಾಡೆಲ್‌ ಚರ್ಚೆಯಾಗುತ್ತಿತ್ತು. ಈ ಬಾರಿ ರಾಜಕೀಯದ ವಿಚಾರದಲ್ಲೂ ಗುಜರಾತ್‌ ಮಾಡೆಲ್‌ ಬಗ್ಗೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್‌ ಕೂಡ ಗುಜರಾತ್‌ ಮಾಡೆಲ್‌ ಬಗ್ಗೆ ಚರ್ಚೆ ಮಾಡುತ್ತಿದೆ. 

ಗುಜರಾತ್‌ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವ ಬಿಜೆಪಿ ಈಗ ಕರ್ನಾಟಕದತ್ತ ಮುಖ ಮಾಡಿದೆ. ಇದರ ನಡುವೆ ಕರ್ನಾಟಕದಲ್ಲಿ ಈಗಿರುವ ಸಾಕಷ್ಟು ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿ ಹೋಗಬಹುದು ಎನ್ನುವ ಅನುಮಾನ ಕಾಡಿದೆ. ಒಟ್ಟಾರೆ ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆಯಂತೂ ಗುಜರಾತ್‌ ಫಲಿತಾಂಶ ನೀಡಿದೆ.

ಕರ್ನಾಟಕಕ್ಕೂ ಅನ್ವಯವಾಗುತ್ತಾ ಗುಜರಾತ್ ವಿಜಯ ಮಂತ್ರ?

ಈ ಕುರಿತಾಗಿ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ, ನಮ್ಮಲ್ಲಿ ಅಭ್ಯರ್ಥಿ ಆಯ್ಕೆಯಲ್ಲೂ ಬದಲಾವಣೆ ಆಗಬೇಕಿದೆ. ಹಲವು ಬಾರಿ ಗೆದ್ದವರಿಗೆ ಟಿಕೆಟ್ ಹಂಚಿಕೆ ಬಗ್ಗೆ ಮರುಚಿಂತನೆ ಆಗಬೇಕಿದೆ. ಹಿರಿಯರನ್ನ ಪರಿಷತ್‌ಗೆ ಕಳಿಸಿ, ಯುವಕರಿಗೆ ಅವಕಾಶ ನೀಡಲಿ. ಹೊಸಬರಿಗೆ ಅವಕಾಶ ಕೊಡುವುದು ಕರ್ನಾಟಕಕ್ಕೂ ಮಾದರಿಯಾಗಲಿ. ಹಿರಿಯ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಮರುಚಿಂತನೆ ಆಗಲಿ ಎಂದು ಹೇಳಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more